Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 10:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು” ಎಂದು ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬರಬೇಕು; ಬಾರದವನು ತನ್ನ ಎಲ್ಲ ಆಸ್ತಿಪಾಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು,” ಎಂದು ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪ್ರಭುಗಳ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು ಎಂದು ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮೂರು ದಿನಗಳೊಳಗೆ ಯಾರಾದರೂ ಬಾರದೆ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ಈ ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಆ ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ, ಅವನ ಆಸ್ತಿಯೆಲ್ಲಾ ದಂಡವಾಗಿ ತೆಗೆದುಕೊಳ್ಳಲಾಗುವುದೆಂದೂ, ಅವನು ಸೆರೆಯಿಂದ ಬಂದವರ ಕೂಟದಿಂದ ಬಹಿಷ್ಕೃತನಾಗುವನು ಎಂದೂ ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 10:8
14 ತಿಳಿವುಗಳ ಹೋಲಿಕೆ  

ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ.


ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”


ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.


ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.


ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.


ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.


ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.


ಮತ್ತು ಯೆಹೋವನ ಮುಂದೆ ಸಭೆ ಸೇರಿದಾಗ, ಬಾರದೆ ಇದ್ದಂಥ ಇಸ್ರಾಯೇಲರು ಯಾರಾರೆಂದು ವಿಚಾರಮಾಡಿದರು. ಯಾಕೆಂದರೆ ಮಿಚ್ಪೆಯಲ್ಲಿ, “ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದು ಹಾಕುವೆವು” ಎಂದು ಆಣೆಯಿಟ್ಟು ಪ್ರಮಾಣಮಾಡಿದ್ದರು.


ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು.


“‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.


ತರುವಾಯ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿಯೂ, “ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿನಲ್ಲಿ ಬಂದು ಸೇರಬೇಕು.


ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತವಾಗಿಯೂ, ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಅಂಗಳದಲ್ಲಿ ಕುಳಿತುಕೊಂಡರು.


ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು