Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಪರಸ್ಪರ ಹಾಡುತ್ತಾ, ಯೆಹೋವನನ್ನು ಸಂಕೀರ್ತಿಸುತ್ತಾ, “ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲರೊಂದಿಗೆ ಶಾಶ್ವತವಾಗಿರುತ್ತದೆ” ಎಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವನ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹಧ್ವನಿಯಿಂದ ಜಯಘೋಷ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಪರಸ್ಪರವಾಗಿ ಹಾಡುತ್ತಾ ಸರ್ವೇಶ್ವರನನ್ನು ಕೀರ್ತಿಸಿದರು. “ಸರ್ವೇಶ್ವರ ಒಳ್ಳೆಯವರು! ಅವರ ಅಚಲಪ್ರೀತಿ ಇಸ್ರಯೇಲರ ಮೇಲೆ ಶಾಶ್ವತ!” ಎಂದು ಕೃತಜ್ಞತಾಸ್ತುತಿ ಮಾಡಿದರು. ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪರಸ್ಪರವಾಗಿ ಹಾಡುತ್ತಾ ಯೆಹೋವನನ್ನು ಕೀರ್ತಿಸುತ್ತಾ - ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲ್ಯರ ಮೇಲೆ ಶಾಶ್ವತವಾದದ್ದೆಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹ ಧ್ವನಿಯಿಂದ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಭಟಿಸಿದರು; ದೇವಾಲಯದ ಅಸ್ತಿವಾರ ಹಾಕಿದ್ದಕ್ಕೆ ಯೆಹೋವನನ್ನು ಸ್ತುತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪರಸ್ಪರವಾಗಿ ಹಾಡುತ್ತಾ, ಕೃತಜ್ಞತಾಸ್ತುತಿ ಮಾಡುತ್ತಾ ಯೆಹೋವ ದೇವರನ್ನು ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು! ಅವರ ಅಚಲ ಪ್ರೀತಿ ಇಸ್ರಾಯೇಲರ ಮೇಲೆ ಶಾಶ್ವತ!” ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ, ಯೆಹೋವ ದೇವರ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:11
32 ತಿಳಿವುಗಳ ಹೋಲಿಕೆ  

ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವುದು.


ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ಯೆಹೋವನಿಗೆ ಸ್ತೋತ್ರ! ಯೆಹೋವನು ಒಳ್ಳೆಯವನು. ಆತನ ನಾಮವನ್ನು ಕೊಂಡಾಡಿರಿ; ಆತನು ಕೃಪಾಪೂರ್ಣನು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿದೆ.


ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.


ಅವರ ಬಳಿಯಲ್ಲಿ ಯೆಹೋವನನ್ನು, ಆತನ ಶಾಶ್ವತವಾದ ಕೃಪೆಗೋಸ್ಕರ ಸ್ತುತಿಸುವುದಕ್ಕೆ ಹೇಮಾನ್, ಯೆದುತೂನ ಮತ್ತು ಹೆಸರು ಹೆಸರಾಗಿ ನೇಮಿಸಲ್ಪಟ್ಟ ಬೇರೆ ಜನರೂ ಇದ್ದರು.


ದೇವಾಲಯದ ಎರಡು ಆರಾಧನಾ ಮಂಡಳಿಯ ಗುಂಪಿನವರೂ, ನಾನೂ, ನನ್ನ ಜೊತೆಯಲ್ಲಿದ್ದ ಅರ್ಧ ಮಂದಿ ಅಧಿಕಾರಿಗಳೂ


ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.


ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು” ಎಂದು ಹೇಳಿದನು.


ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, “ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.


ಯೆಹೋಶುವನು ಜನರಿಗೆ “ನೀವು ಈಗ ಆರ್ಭಟಿಸಬಾರದು; ನಿಮ್ಮ ಧ್ವನಿಯು ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತಾದರೂ ಹೊರಡದಿರಲಿ. ಆರ್ಭಟಿಸಿರೆಂದು ನಾನು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಿರಿ” ಎಂದು ಆಜ್ಞಾಪಿಸಿದನು.


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.


ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು.


‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು