Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜನರು ಮಹಾಧ್ವನಿಯಿಂದ ಅರ್ಭಟಿಸುತ್ತಿದ್ದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಗೊತ್ತಾಗಲಿಲ್ಲ. ಗದ್ದಲವು ಬಹುದೂರದ ವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ಹೇಳಲಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಜನರು ಮಹಾಧ್ವನಿಯಿಂದ ಆರ್ಭಟಿಸುತ್ತಿದ್ದದರಿಂದ ಹರ್ಷಧ್ವನಿ ಯಾವದೋ ಅಳುವವರ ಧ್ವನಿ ಯಾವದೋ ಗೊತ್ತಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರ ಉತ್ಸಾಹಧ್ವನಿಯಲ್ಲಿ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ತಿಳಿಯುತ್ತಿರಲಿಲ್ಲ. ಆದರೆ ಆ ಧ್ವನಿಯು ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ, ಹರ್ಷಧ್ವನಿ ಯಾವುದು, ಅಳುವವರ ಧ್ವನಿ ಯಾವುದು ಎಂದು ಗುರುತಿಸಲಾಗಲಿಲ್ಲ. ಗದ್ದಲವು ಬಹು ದೂರದವರೆಗೂ ಕೇಳಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:13
14 ತಿಳಿವುಗಳ ಹೋಲಿಕೆ  

ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.


ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.


ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.


ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕ ಮಾಡಿದರು. ಅಲ್ಲಿಂದ ಅವರು ಮಹಾ ಸಂತೋಷದಿಂದ ಜಯಘೋಷ ಮಾಡುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ. ನೀವು ಕೇಳಿದ ಶಬ್ದವು ಇದೇ.


ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.


ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು.


ಆದರೆ ಯಾಜಕರಲ್ಲಿಯೂ, ಲೇವಿಯರಲ್ಲಿಯೂ, ಗೋತ್ರಪ್ರಧಾನರಲ್ಲಿಯೂ ಅನೇಕರು ಅಂದರೆ ಮೊದಲಿನ ದೇವಾಲಯವನ್ನು ನೋಡಿದ್ದ ಹಿರಿಯರು ತಮ್ಮ ಕಣ್ಣ ಮುಂದೆ ದೇವಾಲಯದ ಅಸ್ತಿವಾರವು ಹಾಕಲ್ಪಟ್ಟಿದ್ದನ್ನು ನೋಡಿದಾಗ ಬಹಳವಾಗಿ ಅತ್ತರು. ಬೇರೆ ಹಲವರು ಹರ್ಷಧ್ವನಿಯಿಂದ ಜಯಘೋಷ ಮಾಡಿದರು.


ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.


ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು