Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಪಟ್ಟಣವನ್ನೂ ಅದರ ಪೌಳಿಗೋಡೆಗಳನ್ನೂ ಕಟ್ಟುವುದು ಮುಗಿಸಿದರೆ ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ; ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವದು ಕೊನೆಗಾಣುವದಾದರೆ ಅವರು ಕಪ್ಪ ತೆರಿಗೆ ಸುಂಕಗಳನ್ನು ಕೊಡಲಿಕ್ಕಿಲ್ಲ. ಮತ್ತು ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವದೆಂದು ಖಾವಂದರಿಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದೇ ಸಮಯದಲ್ಲಿ ರಾಜರೇ, ನೀವು ತಿಳಿಯಬೇಕಾದ ವಿಷಯವೇನೆಂದರೆ, ಜೆರುಸಲೇಮ್ ಮತ್ತು ಅದರ ಪೌಳಿಗೋಡೆಗಳು ಕಟ್ಟಲ್ಪಟ್ಟಲ್ಲಿ ಅಲ್ಲಿಯ ಪ್ರಜೆಗಳು ತೆರಿಗೆ ಕೊಡುವುದನ್ನು ನಿಲ್ಲಿಸುವರು. ನಿನಗೆ ಕಪ್ಪಕಾಣಿಕೆ ಸಲ್ಲಿಸುವುದನ್ನೂ ಇತರ ತೆರಿಗೆಗಳನ್ನು ಕೊಡುವುದನ್ನೂ ನಿಲ್ಲಿಸುವರು. ಇದರಿಂದಾಗಿ ರಾಜರಿಗೆ ದೊಡ್ಡ ನಷ್ಟವಾಗಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಕಟ್ಟುವುದು ಮುಗಿದರೆ, ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ. ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:13
9 ತಿಳಿವುಗಳ ಹೋಲಿಕೆ  

ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’


ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.


ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.


ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.


ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.


ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು