Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದಂಗೆಯೆಬ್ಬಿಸುತ್ತಾ ಬಂದಿದ್ದಾರೆ; ಇದಲ್ಲದೆ ಜೆರುಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ನದಿಯಾಚೆಯ ಎಲ್ಲ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದ್ದದ್ದಲ್ಲದೆ ಯೆರೂಸಲೇವಿುನಲ್ಲಿ ಬಲಿಷ್ಠ ರಾಜರು ಆಳುತ್ತಾ ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡಿಸುತ್ತಾ ಕಪ್ಪ ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:20
23 ತಿಳಿವುಗಳ ಹೋಲಿಕೆ  

ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.


ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.


ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’


ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.”


ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.


ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.


ಇದಲ್ಲದೆ ದೇಶಾಂತರದಲ್ಲಿ ವ್ಯಾಪಾರಮಾಡುತ್ತಿದ್ದ ವ್ಯಾಪಾರಿಗಳೂ, ವರ್ತಕರೂ, ಅರಬಸ್ಥಾನದ ಅರಸರೂ, ದೇಶಾಧಿಪತಿಗಳೂ ಅರಸನಾದ ಸೊಲೊಮೋನನಿಗೆ ಬೆಳ್ಳಿ ಮತ್ತು ಬಂಗಾರವನ್ನು ತರುತ್ತಿದ್ದರು.


ಹದರೆಜರನ ದಾಸರು ಇಸ್ರಾಯೇಲರ ಮುಂದೆ ತಮ್ಮ ಕೈ ಸಾಗದೆಂದು ತಿಳಿದು ದಾವೀದನೊಡನೆ ಒಪ್ಪಂದ ಮಾಡಿಕೊಂಡು ಅವನ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಮನಸ್ಸು ಮಾಡಲ್ಲಿಲ್ಲ.


ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.


ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.


ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.


ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ನನ್ನ ಆಜ್ಞಾನುಸಾರ ವಿಚಾರಣೆ ಮಾಡಿ ಪರಿಶೀಲಿಸಿದಾಗ ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರುದ್ಧವಾಗಿ ತಿರುಗಿಬೀಳುತ್ತಾ, ದ್ರೋಹಮಾಡುತ್ತಾ, ದಂಗೆಯೆಬ್ಬಿಸುತ್ತಾ ಇದ್ದವರು ಎಂದು ತಿಳಿಯಿತು.


ಆದುದರಿಂದ ಆ ಮನುಷ್ಯರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವ ವರೆಗೆ ಆ ಪಟ್ಟಣವನ್ನು ಕಟ್ಟಲು ಆವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.


ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.


ಅದರಲ್ಲಿ ಆಳುವವರ ರಾಜದಂಡಗಳಿಗೆ ಯೋಗ್ಯವಾದ ಗಟ್ಟಿಕೊಂಬೆಗಳಿದ್ದವು, ಅವುಗಳ ಎತ್ತರವು ಉಳಿದ ರೆಂಬೆಗಳಿಗಿಂತ ಹೆಚ್ಚಾಗಿತ್ತು, ಬಹಳ ರೆಂಬೆಗಳ ಮಧ್ಯದಲ್ಲಿ ಉದ್ದುದ್ದವಾಗಿ ಕಾಣಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು