Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪರ್ಷಿಯರಾಜ ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್, ಈ ಮೊದಲಾದವರು ಅರ್ತಷಸ್ತನಿಗೆ ಪತ್ರ ಬರೆದರು. ಆ ಪತ್ರ ಅರಮಾಯಿಕ್ ಲಿಪಿಯಲ್ಲೂ ಅರಮಾಯಿಕ್ ಭಾಷೆಯಲ್ಲೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ವಿುತ್ರದಾತ, ಟಾಬೆಯೇಲ್ ಈ ಮೊದಲಾದವರು ಪಾರಸಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಅರಾಮ್ಯ ಭಾಷೆಯಲ್ಲಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅರ್ತಷಸ್ತನು ಪರ್ಶಿಯಾದ ರಾಜನಾದಾಗ ಬಿಷ್ಲಾಮ್, ಮಿತ್ರದಾತ್ ಮತ್ತು ಟಾಬೆಯೇಲ್ ಈ ಮೊದಲಾದವರು ಯೆಹೂದ್ಯರ ವಿರುದ್ಧವಾಗಿ ರಾಜನಿಗೆ ಆಪಾದನಾ ಪತ್ರವನ್ನು ಅರಮೇಯಿಕ್ ಭಾಷೆಯಲ್ಲಿಯೂ ಅದರ ಲಿಪಿಯಲ್ಲಿಯೂ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ, ಮಿತ್ರದಾತನೂ, ಟಾಬೆಯೇಲನೂ, ಮಿಕ್ಕಾದ ಅವರ ಜೊತೆಗಾರರೂ ಪಾರಸಿಯ ಅರಸನಾದ ಅರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯ ಭಾಷೆಯಲ್ಲಿಯೂ, ಅರಾಮ್ಯ ಲಿಪಿಯಲ್ಲಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:7
12 ತಿಳಿವುಗಳ ಹೋಲಿಕೆ  

ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವ ಯೆಹೂದ್ಯರಿಗೂ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು, ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.


ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.


ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.


ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.


ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.


ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.


ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಮಂದಿರವನ್ನು ಕಟ್ಟುತ್ತಿದ್ದಾರೆ ಎಂಬ ಸುದ್ದಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ತಿಳಿದುಬಂತು.


ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರು ಯೆರೂಸಲೇಮಿಗೆ ವಿರುದ್ಧವಾಗಿ ಮುಂದಿನ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದರು.


ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.


ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ.


ನಾನು ಅರಸನ ಪಾನಸೇವಕನಾಗಿದ್ದನು. ಅರಸನಾದ ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ ನಾನು ದ್ರಾಕ್ಷಾರಸವನ್ನು ತಂದು ಅವನಿಗೆ ಕೊಟ್ಟೆನು. ನಾನು ಅರಸನ ಸನ್ನಿಧಿಯಲ್ಲಿ ಇದ್ದಾಗ ಹಿಂದೆ ಎಂದೂ ಮನಗುಂದಿದವನಂತೆ ಇರಲಿಲ್ಲ.


ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು