Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರವಾದಿಗಳಾದ ಹಗ್ಗಾಯನೂ ಮತ್ತು ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್ ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ಯೆಹೂದ್ಯರಿಗೆ ದೇವಾಲಯ ಕಟ್ಟಿಸುವ ಬಗ್ಗೆ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಪ್ರವಾದಿಗಳಾದ ಹಗ್ಗಾಯ ಮತ್ತು ಇದ್ದೋವಿನ ಮಗ ಜೆಕರ್ಯ ಎಂಬವರು ಇಸ್ರಯೇಲ್ ದೇವರಿಂದ ಪ್ರೇರಿತರಾಗಿ, ಅವರ ಹೆಸರಿನಲ್ಲಿ ಜುದೇಯದ ಮತ್ತು ಜೆರುಸಲೇಮಿನ ಯೆಹೂದ್ಯರನ್ನು ಪ್ರಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ಇಸ್ರಾಯೇಲ್‍ದೇವರಿಂದ ಪ್ರೇರಿತರಾಗಿ ಆತನ ಹೆಸರಿನಲ್ಲಿ ಯೆಹೂದದ ಮತ್ತು ಯೆರೂಸಲೇವಿುನ ಯೆಹೂದ್ಯರನ್ನು ಪ್ರಬೋಧಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಸಮಯಗಳಲ್ಲಿ ಪ್ರವಾದಿಗಳಾದ ಹಗ್ಗಾಯನೂ ಇದ್ದೋವಿನ ಮಗನಾದ ಜೆಕರ್ಯನೂ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿದ್ದರು. ಯೆಹೂದ ಪ್ರಾಂತ್ಯದಲ್ಲಿದ್ದ ಮತ್ತು ಜೆರುಸಲೇಮಿನಲ್ಲಿದ್ದ ಯೆಹೂದ್ಯರನ್ನು ಅವರು ಪ್ರೋತ್ಸಾಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈಗ ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:1
9 ತಿಳಿವುಗಳ ಹೋಲಿಕೆ  

ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು.


ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಅಂದಿನಿಂದ ಪರ್ಷಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.


ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.


“ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!


ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು