Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ದಾರ್ಯಾವೆಷ ರಾಜರಿಗೆ ಸರ್ವಥಾ ಕ್ಷೇಮ! ನಾವು ಜುದೇಯ ನಾಡಿಗೆ ಹೋಗಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಇದನ್ನು ರಾಜರಿಗೆ ಈ ಮೂಲಕ ಅರಿಕೆಮಾಡುತ್ತಿದ್ದೇವೆ: ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಿದ್ದಾರೆ. ಈ ಕೆಲಸ ಜಾಗರೂಕತೆಯಿಂದ ಮುಂದುವರೆದಿದೆ; ಅವರ ಶ್ರಮೆಯಿಂದ ವೇಗವಾಗಿ ಬೆಳೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಾರ್ಯಾವೆಷರಾಜರಿಗೆ ಸರ್ವಥಾಕ್ಷೇಮ. ನಾವು ಯೆಹೂದಸೀಮೆಗೆ ಹೋಗಿ ಮಹೋನ್ನತದೇವರ ಆಲಯವನ್ನು ನೋಡಿದೆವೆಂಬದಾಗಿ ರಾಜರಿಗೆ ಅರಿಕೆ ಮಾಡುತ್ತೇವೆ. ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ ಮುಂದರಿದು ಅವರ ಕೈಯಿಂದ ಬೆಳೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರಾಜನೇ, ನಾವು ಯೆಹೂದ ಪ್ರಾಂತ್ಯವನ್ನು ಸಂದರ್ಶಿಸಿದ್ದೇವೆಂದು ನಿಮಗೆ ತಿಳಿಸುತ್ತೇವೆ. ಅಲ್ಲಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಯೆಹೂದ ಪ್ರಾಂತ್ಯದ ಜನರು ದೊಡ್ಡ ಕಲ್ಲುಗಳಿಂದ ದೇವಾಲಯವನ್ನು ಕಟ್ಟುತ್ತಿದ್ದಾರೆ. ದೊಡ್ಡದೊಡ್ಡ ಮರದ ತೊಲೆಗಳನ್ನು ಗೋಡೆಯ ಮೇಲೆ ಕುಳ್ಳಿರಿಸಿದ್ದಾರೆ. ಯೆಹೂದ ಪ್ರಾಂತ್ಯದ ಜನರು ಜಾಗರೂಕತೆಯಿಂದಲೂ ತುಂಬ ಪ್ರಯಾಸದಿಂದಲೂ ಕಾರ್ಯವನ್ನು ನಡಿಸುತ್ತಿದ್ದಾರೆ. ಬಹಳ ವೇಗವಾಗಿ ಕೆಲಸ ಮುಂದುವರಿಯುತ್ತಿರುವದರಿಂದ ದೇವಾಲಯವು ಬೇಗನೆ ಸಂಪೂರ್ಣವಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅರಸನಿಗೆ ತಿಳಿಯಬೇಕಾದದ್ದೇನೆಂದರೆ, ನಾವು ಯೆಹೂದರ ದೇಶದಲ್ಲಿರುವ ಮಹಾ ದೇವರ ಆಲಯಕ್ಕೆ ಹೋದೆವು. ಅದನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನು ಇಡುತ್ತಿದ್ದಾರೆ. ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಿಂದ ವೇಗವಾಗಿ ವೃದ್ಧಿಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:8
20 ತಿಳಿವುಗಳ ಹೋಲಿಕೆ  

“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.


ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.


ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.


ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.


ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.


ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಒಯ್ಯಲ್ಪಟ್ಟವರು ಹಿಂತಿರುಗಿ ತಮ್ಮ ಸ್ವದೇಶವಾದ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ, ಯೆರೂಸಲೇಮಿಗೂ ಹಿಂತಿರುಗಿದರು.


ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು.


ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಬಾಬಿಲೋನಿಗೆ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇಮಿಗೂ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಸೆರೆಯಿಂದ ಹಿಂತಿರುಗಿ ಬಂದ (ಯೆಹೂದ) ಸಂಸ್ಥಾನದವರ ಜನಗಣತಿ.


ನಮ್ಮ ಆಶ್ರಯದುರ್ಗ ಅವರ ಆಶ್ರಯದುರ್ಗದಂತಲ್ಲಾ, ನಮ್ಮ ಅಶ್ರಯದಾತನಿಗೆ ಯಾರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ಒಪ್ಪಿಕೊಳ್ಳುತ್ತಾರೆ.


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.


ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, “ದಾರ್ಯಾವೆಷ್ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ.


“ಅಲ್ಲಿನ ಹಿರಿಯರ ಹತ್ತಿರ, ‘ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು’ ಎಂದು ವಿಚಾರಮಾಡಿದೆವು.


ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು