Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡ ದೇವರು, ಈ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ಜೆರುಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕಾಗಲಿ, ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ನಾಶಮಾಡಲಿ! ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಕೈಗೊಳ್ಳತಕ್ಕದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತು ತನ್ನ ಹೆಸರನ್ನು ಸ್ಥಾಪಿಸುವದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವದಕ್ಕೂ ಯೆರೂಸಲೇವಿುನ ದೇವಾಲಯವನ್ನು ನಾಶಮಾಡುವದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ಕೆಡವಿಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಆಲಸ್ಯವಿಲ್ಲದೆ ಕೈಕೊಳ್ಳಬೇಕು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜೆರುಸಲೇಮಿನಲ್ಲಿ ದೇವರು ತನ್ನ ಹೆಸರನ್ನು ಸ್ಥಾಪಿಸಿರುತ್ತಾನೆ. ಆದ್ದರಿಂದ ಯಾವ ಅರಸನಾಗಲಿ ಅಧಿಕಾರಿಯಾಗಲಿ ಈ ಆಜ್ಞೆಗೆ ವಿರುದ್ಧವಾಗಿ ನಡೆದರೆ ದೇವರೇ ಅವನನ್ನು ಸೋಲಿಸುವನು; ಯಾರಾದರೂ ಆ ದೇವಾಲಯವನ್ನು ಕೆಡವಲು ಪ್ರಯತ್ನಿಸಿದರೆ ಅಂಥವರನ್ನು ದೇವರೇ ನಾಶಮಾಡುವನು. ಇದನ್ನು ದಾರ್ಯಾವೆಷನೆಂಬ ನಾನೇ ಆಜ್ಞಾಪಿಸಿರುತ್ತೇನೆ. ಈ ಆಜ್ಞೆಯನ್ನು ಬೇಗನೆ ಮತ್ತು ಸಂಪೂರ್ಣವಾಗಿ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:12
24 ತಿಳಿವುಗಳ ಹೋಲಿಕೆ  

ಆತನು ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು;


ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.


ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.


ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು.


ನನ್ನ ನಾಮ ಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.


ನೀವು ಆಡು ಕುರಿಗಳಲ್ಲಾಗಲಿ, ದನಗಳಲ್ಲಾಗಲಿ ಪಸ್ಕದ ಪಶುವನ್ನು ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ಆತನಿಗಾಗಿ ವಧಿಸಬೇಕು.


ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟಿದ್ದರಿಂದ ಹೊಳೆಯ ಈಚೆಯ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಮತ್ತು ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು.


ಯೆಹೂದ್ಯರ ಹಿರಿಯರು, ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರವಾದನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪರ್ಷಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.


ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೊಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರ,


ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ.


ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು