Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ಪರಲೋಕದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ, ಟಗರು, ಕುರಿಮರಿಗಳನ್ನೂ, ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಯೆರೂಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕು ಎಂಬುದಾಗಿಯೂ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪರಲೋಕ ದೇವರಿಗೆ ದಹನಬಲಿಗಳನ್ನು ಸಮರ್ಪಿಸಲು ಬೇಕಾದ ಹೋರಿ, ಟಗರು, ಕುರಿಗಳನ್ನೂ ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಜೆರುಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನ ತಪ್ಪದೆ ಒದಗಿಸಿಕೊಡಬೇಕೆಂದು ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪರಲೋಕ ದೇವರ ಸರ್ವಾಂಗಹೋಮಗಳಿಗೋಸ್ಕರ ಬೇಕಾದ ಹೋರಿ ಟಗರು ಕುರಿಮರಿಗಳನ್ನೂ ಗೋದಿ ಉಪ್ಪೂ ದ್ರಾಕ್ಷಾರಸ ಎಣ್ಣೆ ಇವುಗಳನ್ನೂ ಯೆರೂಸಲೇವಿುನ ಯಾಜಕರು ಹೇಳುವ ಪ್ರಕಾರ ಪ್ರತಿದಿನವೂ ತಪ್ಪದೆ ಒದಗಿಸಿ ಕೊಡಬೇಕೆಂಬದಾಗಿಯೂ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಜನರಿಗೆ ಏನು ಅವಶ್ಯಕತೆಯಿದೆಯೋ ಅದನ್ನು ಪೂರೈಸಬೇಕು. ಅವರಿಗೆ ಎಳೆಹೋರಿಗಳು, ಟಗರುಗಳು, ಗಂಡುಕುರಿಗಳು ಪರಲೋಕದ ದೇವರಿಗೆ ಯಜ್ಞವನ್ನರ್ಪಿಸಲು ಬೇಕಾಗಿದ್ದರೆ ಅವುಗಳನ್ನು ಕೊಡಿರಿ. ಜೆರುಸಲೇಮಿನ ಯಾಜಕರು ಗೋಧಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಬೇಕು ಎಂದು ಹೇಳಿದರೆ ಅದನ್ನು ಪ್ರತಿದಿನ ತಪ್ಪದೆ ಒದಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ ಅವರಿಗೆ ಬೇಕಾದ ಹೋರಿಗಳೂ, ಟಗರುಗಳೂ, ಕುರಿಮರಿಗಳೂ, ಗೋಧಿಯೂ, ಉಪ್ಪೂ, ದ್ರಾಕ್ಷಾರಸವೂ, ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:9
13 ತಿಳಿವುಗಳ ಹೋಲಿಕೆ  

“‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.


“ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.


ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.


ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.


ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತ್ಯಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕು.


ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು