Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೊಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅರಸನು ಮತ್ತು ಅವನ ಮಂತ್ರಿಗಳು ಜೆರುಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇವಿುನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೋಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿ ಬಂಗಾರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನೂ ನನ್ನ ಸಲಹೆಗಾರರೂ ಜೆರುಸಲೇಮಿನಲ್ಲಿರುವ ಇಸ್ರೇಲಿನ ದೇವರಿಗೆ ಬೆಳ್ಳಿಬಂಗಾರಗಳನ್ನು ಅರ್ಪಿಸುತ್ತೇವೆ. ನೀನು ಹೋಗುವಾಗ ಅವುಗಳನ್ನು ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅರಸನು ಮತ್ತು ಅವನ ಮಂತ್ರಿಗಳು ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:15
20 ತಿಳಿವುಗಳ ಹೋಲಿಕೆ  

ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಲಿ, ಯೆಹೋವನಿಗೆ ಸ್ತೋತ್ರ!


ಆದರೆ ನಾನು ನಿನಗೋಸ್ಕರ ಒಂದು ಆಲಯವನ್ನು, ನೀನು ಶಾಶ್ವತವಾಗಿ ವಾಸಮಾಡತಕ್ಕ ಸ್ಥಳವಾಗಿರಲೆಂದು ನಾನು ಕಟ್ಟಿಸಿದ್ದೇನೆ” ಎಂದನು.


ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.


ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.


ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.


ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.


ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು.


ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು!


ಆಗ ಇಸ್ರಾಯೇಲ್ ಗೋತ್ರಕುಟುಂಬಗಳ ಪ್ರಧಾನರೂ, ಸಹಸ್ರಾಧಿಪತಿಗಳೂ, ಅರಸನ ಕೆಲಸದವರ ಮುಖ್ಯಸ್ಥರೂ, ದೇವಾಲಯದ ಕೆಲಸಕ್ಕೋಸ್ಕರ ಸ್ವ ಇಚ್ಛೆಯಿಂದ


ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು.


ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.


ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.


ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು