ಎಜ್ರ 7:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಗಡಿಪಾರುಮಾಡುವದು, ದಂಡತೆರಿಸುವದು, ಬೇಡಿಹಾಕುವದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ದೇವರ ಕಟ್ಟಳೆಗಳಿಗಾಗಲಿ ಅರಸನ ಆಜ್ಞೆಗಳಿಗಾಗಲಿ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲಿ ಗಡಿಪಾರಿನಿಂದಾಗಲಿ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲಿ ಸೆರೆಮನೆವಾಸದಿಂದಾಗಲಿ ಅವರಿಗೆ ದಂಡನೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಿನ್ನ ದೇವರಾಜ್ಞೆಯನ್ನೂ, ರಾಜಾಜ್ಞೆಯನ್ನೂ ಕೈಗೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿ ಹಾಕುವುದು, ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.” ಅಧ್ಯಾಯವನ್ನು ನೋಡಿ |
ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.