Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರ್ತಷಸ್ತ ರಾಜನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರ್ತಷಸ್ತನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರ್ತಷಸ್ತನ ಆಳಿಕೆಯಲ್ಲಿ ನನ್ನೊಂದಿಗೆ ಬಾಬೆಲಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಾಬಿಲೋನಿನಿಂದ ಜೆರುಸಲೇಮಿಗೆ ನನ್ನೊಂದಿಗೆ (ಎಜ್ರ) ಹೊರಟ ಇಸ್ರೇಲರ ಕುಲಪ್ರಧಾನರ ಮತ್ತು ಇತರ ಜನರ ವಿವರಗಳು ಹೀಗಿದೆ. ಅರಸನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ನಾವು ಜೆರುಸಲೇಮಿಗೆ ಬಂದು ಸೇರಿದೆವು. ಬಂದವರ ಹೆಸರುಗಳು ಹೀಗಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಬಾಬಿಲೋನಿನಿಂದ ನನ್ನ ಸಂಗಡ ಹೊರಟು ಬಂದವರ ಕುಟುಂಬಗಳಲ್ಲಿ ಮುಖ್ಯಸ್ಥರು ಯಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:1
16 ತಿಳಿವುಗಳ ಹೋಲಿಕೆ  

ಅವನೊಡನೆ ಕೆಲವು ಜನರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಗಾಯಕರೂ, ದ್ವಾರಪಾಲಕರೂ ಮತ್ತು ದೇವಸ್ಥಾನದಾಸರೂ ಅರ್ತಷಸ್ತ ಅರಸನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಬಂದರು.


ನನ್ನ ರಾಜ್ಯದಲ್ಲಿರುವ ಇಸ್ರಾಯೇಲರು ತಮ್ಮ ಯಾಜಕರು ಮತ್ತು ಲೇವಿಯರು ಹಾಗು ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸುಳ್ಳವರೆಲ್ಲರೂ ನಿನ್ನ ಸಂಗಡ ಹೋಗಬಹುದೆಂದು ಅಪ್ಪಣೆ ಕೊಡುತ್ತಿದ್ದೇನೆ.


ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕೋದ್ಯೋಗದಿಂದ ತಿರಸ್ಕರಿಸಲ್ಪಟ್ಟರು.


ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.


ಯುದ್ಧವೀರರೂ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.


ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.


ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.


ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.


ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.


ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲ್ ಊರಿನ ವರೆಗಿರುವ ಗ್ರಾಮಗಳೂ ಅವರ ನಿವಾಸಸ್ಥಾನಗಳಾಗಿದ್ದವು. ಅವರು ವಂಶಾವಳಿಯ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು.


ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.


ಫೀನೆಹಾಸನ ಸಂತಾನದವರಲ್ಲಿ ಗೇರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್; ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್.


ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:


ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು