Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಒಂದುಗೂಡಿಸಿದೆ. ಅಲ್ಲಿ ಮೂರು ದಿನ ಪಾಳೆಯ ಮಾಡಿಕೊಂಡ ಮೇಲೆ ನನ್ನೊಡನೆ ಜನಸಾಮಾನ್ಯರು ಹಾಗು ಯಾಜಕರು ಬಂದಿದ್ದರಾದರೂ ಲೇವಿಯರಲ್ಲಿ ಯಾರೂ ಬರದೆ ಇದ್ದುದು ಕಂಡುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಹವಾ ಪ್ರಾಂತದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯ ಮಾಡಿಕೊಂಡ ಮೇಲೆ ಸಾಧಾರಣಜನರೂ ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಎಜ್ರನಾದ ನಾನು ಅಹವಾ ಕಡೆಗೆ ಹರಿಯುವ ನದಿಯ ಬಳಿಗೆ ಬರುವಂತೆ ಮೇಲಿನ ಎಲ್ಲಾ ಜನರಿಗೆ ಹೇಳಿದೆ. ಆ ಸ್ಥಳದಲ್ಲಿ ನಾವು ಮೂರು ದಿನ ಇದ್ದೆವು. ಆ ಗುಂಪಿನಲ್ಲಿ ಯಾಜಕರೂ ಇದ್ದರು ಎಂದು ನಮಗೆ ತಿಳಿದುಬಂತು. ಆದರೆ ಲೇವಿಯರು ಅವರಲ್ಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು, ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ, ಯಾಜಕರನ್ನೂ ಶೋಧಿಸಿ ನೋಡುವಾಗ, ಲೇವಿಯರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:15
12 ತಿಳಿವುಗಳ ಹೋಲಿಕೆ  

ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.


ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.


ಅವನೊಡನೆ ಕೆಲವು ಜನರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಗಾಯಕರೂ, ದ್ವಾರಪಾಲಕರೂ ಮತ್ತು ದೇವಸ್ಥಾನದಾಸರೂ ಅರ್ತಷಸ್ತ ಅರಸನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಬಂದರು.


ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು.


ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು, ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.


ಫೀನೆಹಾಸನ ಸಂತಾನದವರಲ್ಲಿ ಗೇರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್; ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್.


ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.


ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’


ಬಿಗ್ವೈಯವರಲ್ಲಿ ಜಕ್ಕೂರನ ಮಗನಾದ ಊತೈಯೂ ಅವನೊಡನೆ 70 ಗಂಡಸರು.


ಆದುದರಿಂದ ನಾನು ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ, ಪಂಡಿತರಾದ ಯೋಯಾರೀಬ್ ಎಲ್ನಾತಾನ್ ಇವರನ್ನೂ ಕರೆಯಿಸಿದೆನು.


ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು