Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಗಳನ್ನು ತೆಗೆದುಕೊಂಡದರಿಂದ ದೇವಕುಲವು ಅನ್ಯದೇಶಗಳವರೊಡನೆ ವಿುಶ್ರವಾಯಿತು. ಪ್ರಭುಗಳೂ ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸ್ರೇಲ್ ಜನರು ತಮ್ಮ ಸುತ್ತಲು ವಾಸಿಸುವ ಜನರೊಂದಿಗೆ ಮದುವೆಯಾಗಿದ್ದಾರೆ. ಇಸ್ರೇಲ್ ಜನರು ದೇವರ ವಿಶೇಷ ಜನರಾಗಿದ್ದಾರೆ. ಆದರೆ ಈಗ ಅನ್ಯರೊಂದಿಗೆ ಬೆರೆತು ಹೋಗಿದ್ದಾರೆ. ಇಸ್ರೇಲರ ಪ್ರಧಾನರು, ಮುಖ್ಯಾಧಿಕಾರಿಗಳು ಈ ರೀತಿಯಾಗಿ ಮಾಡಿ ಜನರಿಗೆ ಕೆಟ್ಟ ಮಾದರಿಯಾಗಿ ಜೀವಿಸುತ್ತಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇಸ್ರಾಯೇಲರು ತಮಗೂ, ತಮ್ಮ ಪುತ್ರರಿಗೂ ಅವರ ಪುತ್ರಿಯರನ್ನು ತೆಗೆದುಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ. ನಿಶ್ಚಯವಾಗಿ ಪ್ರಧಾನರು ಮತ್ತು ಅಧಿಕಾರಸ್ಥರು ಈ ಅಪನಂಬಿಗಸ್ತಿಕೆಗೆ ಮುಂದಾಳುಗಳಾದರು,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:2
24 ತಿಳಿವುಗಳ ಹೋಲಿಕೆ  

ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.


ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.


ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.


ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.


ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”


ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.


ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.


ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.


ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.


ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?


ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.


ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.


ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಸೇರಿಕೊಂಡು ಅವರೊಂದಿಗೆ ಗಂಡು ಹೆಣ್ಣು ಕೊಟ್ಟು ತಂದು ಸಂಬಂಧವನ್ನಿಟ್ಟುಕೊಂಡರೆ,


ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂ ಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂ ಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ಥ್ಯವನ್ನಾಗಿ ಬಿಡುವಿರಿ’ ಎಂದು ಹೇಳಿದಿಯಲ್ಲಾ.


ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?


ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.


ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,


ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು ಮತ್ತು ಹಿತ್ತಿಯರು ಎಂಬ ಜನಾಂಗಗಳ ಸ್ತ್ರೀಯರನ್ನು ಮೋಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು