Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನು ಬರೆಯುವ ಪತ್ರ. ನಾನು ದೇವರ ಇಷ್ಟಾನುಸಾರವಾಗಿ ಅಪೊಸ್ತಲನಾಗಿದ್ದೇನೆ. ಎಫೆಸ ಪಟ್ಟಣದಲ್ಲಿ ವಾಸವಾಗಿರುವ ಮತ್ತು ಕ್ರಿಸ್ತಯೇಸುವಿನಲ್ಲಿ ನಂಬಿಕೆಯಿಟ್ಟಿರುವ ಪರಿಶುದ್ಧ ದೇವಜನರಿಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೆವಾಚ್ಯಾ ಮನಾ ಸಾರ್ಕೆ ಕ್ರಿಸ್ತ್ ಜೆಜುಚೊ ಎಕ್ ಅಪೊಸ್ತಲ್ ಪಾವ್ಲು, ಎಫೆಜಾತ್ಲ್ಯಾ ಕ್ರಿಸ್ತಾ ಜೆಜುಚ್ಯಾ ಎಕ್ವಟಾಚ್ಯಾ ಜಿವನಾತ್ ವಿಶ್ವಾಸಾನ್ ಹೊತ್ತ್ಯಾ ದೆವಾಚ್ಯಾ ಲೊಕಾಕ್ನಿ ಲಿವ್ತಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:1
27 ತಿಳಿವುಗಳ ಹೋಲಿಕೆ  

ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,


ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ


ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು,


ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.


ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು.


ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.


ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,


ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.


ನನ್ನ ಸೇವಕನಾದ ಮೋಶೆಯು ಅಂಥವನಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.


ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ.


ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,


ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ,


ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು