Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೊ ತೆಜೊ ಉಜ್ವೊಡ್ ತುಮಿ ಬಗಿ ಸಾರ್ಕೆ ತುಮ್ಚಿ ಮನಾ ಉಗ್ಡುಂದಿತ್, ಅಸೆ ತೆನಿ ಕಸ್ಲ್ಯಾ ಬರೊಸ್ಯಾಸಾಟ್ನಿ ತುಮ್ಕಾ ಬಲ್ವುಲ್ಯಾನಾಯ್ ಮನುನ್ ತುಮ್ಕಾ ಕಳುಂದಿತ್, ತೊ ಅಪ್ನಾಚ್ಯಾ ಭಕ್ತಾಕ್ನಿ ದಿತಲಿ ಗೊಸ್ಟಿಯಾ ಅನಿ ಆಶಿರ್ವಾದಾ ಕವ್ಡಿ ಮೊಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:18
49 ತಿಳಿವುಗಳ ಹೋಲಿಕೆ  

ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.


ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,


ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,


ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.


ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.


ಆದುದರಿಂದ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು.


ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.


ಹೀಗಿರಲಾಗಿ ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.


ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.


ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,


ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.


ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.


ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.


ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.


ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.


ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.


ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.


ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?


ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.


ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು