Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದವನಾದ ಆತನೇ ನಮಗೆ ಸಮಾಧಾನಕರ್ತೃವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿರೂಪವಾದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ತೆಗೆದುಹಾಕಿ ಇದ್ದ ದ್ವೇಷವನ್ನು ಮುಗಿಸಿ ನಮ್ಮನ್ನು ಅಗಲಿಸಿದ ಅಡ್ಡಗೋಡೆಯನ್ನು ಕೆಡವಿಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕ್ರಿಸ್ತನಿಂದ ಈಗ ನಮಗೆ ಸಮಾಧಾನ ದೊರೆತಿದೆ. ಕ್ರಿಸ್ತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಒಂದೇ ಜನಾಂಗವನ್ನಾಗಿ ಮಾಡಿದ್ದಾನೆ. ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ಮಧ್ಯೆ ಒಂದು ಅಡ್ಡಗೋಡೆಯಿದೆಯೋ ಎಂಬಂತೆ ಬೇರ್ಪಟ್ಟಿದ್ದರು. ಅವರು ಒಬ್ಬರನ್ನೊಬ್ಬರು ದ್ವೇಷಿಸಿದರು. ಆದರೆ ಕ್ರಿಸ್ತನು ತನ್ನ ದೇಹವನ್ನೇ ಅರ್ಪಿಸುವುದರ ಮೂಲಕ ದ್ವೇಷವೆಂಬ ಆ ಗೋಡೆಯನ್ನು ಕೆಡವಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕ್ರಿಸ್ತ ಯೇಸು ತಾವೇ ನಮ್ಮ ಸಮಾಧಾನವಾಗಿದ್ದು, ಎರಡು ಗುಂಪಿನವರನ್ನು ಒಂದು ಮಾಡಿ, ಅಗಲಿಸಿದ ವೈರತ್ವದ ಅಡ್ಡಗೋಡೆಯನ್ನು ತಮ್ಮ ಶರೀರದ ಮೂಲಕ ಕೆಡವಿಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕಶ್ಯಾಕ್ ಮಟ್ಲ್ಯಾರ್, ಕ್ರಿಸ್ತಾನ್ ಜುದೆವಾಕ್ನಿ ಅನಿ ಜುದೆವ್ ನ್ಹಯ್ ಅಸಲ್ಲ್ಯಾಕ್ನಿ ಎಕ್ ಕರುನ್ ಅಪ್ನಿಚ್ ಅಮ್ಚ್ಯಾ ಮದ್ದಿ ಸಮಾಧಾನ್ ಹಾನ್ಲ್ಯಾನ್ ಅಪ್ನಾಚ್ಯಾ ಸ್ವಂತ ಆಂಗಾನ್ ತೆಂಚ್ಯಾ ದೊಗಾಂಚ್ಯಾ ಮದ್ದಿ ಎಗ್ಳೆ ಕರುಕ್ ಮನುನ್ ಹೊತ್ತಿ ದುಶ್ಮನ್ಕಿಚಿ ಭಿತ್ತ್ ತೆನಿ ಫೊಡುನ್ ಟಾಕ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:14
28 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.


ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.


ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.


ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.


ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.


ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.


ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”


ಆತನೇ ನಮಗೆ ಸಮಾಧಾನಪ್ರದನು. ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ, ನಮ್ಮ ಅರಮನೆಗಳನ್ನು ತುಳಿದುಹಾಕುವಾಗ, ನಾವು ಅವರಿಗೆ ವಿರುದ್ಧವಾಗಿ ಏಳು ಪಾಲಕರನ್ನು ಹೌದು ಎಂಟು ಪುರುಷಶ್ರೇಷ್ಠರನ್ನು ನೇಮಿಸುವೆವು.


ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.


ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು


ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿ ಸಮಾಧಾನದಿಂದ ಇರುವರು.


ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.


ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು