Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾವು ದೇವರಿಗೆ ವಿರುದ್ಧವಾಗಿ ಮಾಡಿದ ಕಾರ್ಯಗಳ ದೆಸೆಯಿಂದ ಸತ್ತವರಾಗಿದ್ದೆವು. ಆದರೆ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ನೀವು ದೇವರ ಕೃಪೆಯಿಂದ ರಕ್ಷಣೆ ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅಮಿ ಖಾಯ್ಲ್ ಹೊವ್ನ್ ಚಲಿನಸಲ್ಲ್ಯಾಕ್ ಲಾಗುನ್ ಆತ್ಮಿಕ್ ರಿತಿನ್ ಮರುನ್ ಗೆಲ್ಲಾಂವ್, ತನ್ನಾ ತೆನಿ ಕ್ರಿಸ್ತಾಚ್ಯಾ ವಾಂಗ್ಡಾ ಅಮ್ಕಾ ಝಿತ್ತೆ ಕರ್ಲ್ಯಾನ್ ಹೆ ತುಮಿ ಬಚಾವ್ ಹೊಲ್ಲೆ ದೆವಾಚ್ಯಾ ಕುರ್ಪೆ ವೈನಾಚ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:5
20 ತಿಳಿವುಗಳ ಹೋಲಿಕೆ  

ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.


ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.


ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.


ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.


ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.


ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.


ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.


ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.


ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.


ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!


ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.


ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು