Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಕ್ರಿಸ್ತಯೇಸುವಿನ ಸೆರೆಯಾಳು. ಯೆಹೂದ್ಯರಲ್ಲದ ನಿಮಗೋಸ್ಕರ ನಾನು ಸೆರೆಯಾಳಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹ್ಯಾ ಕಾರಾನಾ ಸಾಟ್ನಿ ಪಾವ್ಲು ಮನ್ತಲೊ ಮಿಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನು ತುಮ್ಚ್ಯಾ ಸಾಟ್ನಿ ಕ್ರಿಸ್ತಾಚೊ ಬಂಧಿ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:1
30 ತಿಳಿವುಗಳ ಹೋಲಿಕೆ  

ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.


ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.


ನೀನು ಯುಕ್ತವಾದದ್ದನ್ನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ನನಗೆ ಕ್ರಿಸ್ತನಲ್ಲಿ ಪೂರ್ಣ ಅಧಿಕಾರವಿದ್ದರೂ ಹಾಗೆ ಆಜ್ಞಾಪಿಸದೇ


ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.


ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ,


ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು,


ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.


ಕ್ರಿಸ್ತಯೇಸುವಿನ ನಿಮಿತ್ತವಾಗಿ ನನ್ನ ಜೊತೆ ಸೆರೆಯವನಾದ ಎಪಫ್ರನೂ ನಿನಗೆ ವಂದನೆ ತಿಳಿಸುತ್ತಾನೆ.


ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು.


ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,


ಇದು ಪೌಲನೆಂಬ ನಾನು ಸ್ವಂತ ಕೈಯಿಂದಲೇ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.


ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.


ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,


ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.


ಸಹೋದರರೇ, ನಾನಾದರೋ ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ನನಗೆ ಹಿಂಸೆಯಾಗುವುದಾದರೂ ಯಾಕೆ? ಹಾಗಿದ್ದ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲಾ?


ನೋಡಿರಿ, ಪೌಲನೆಂಬ ನಾನು ನಿಮಗೆ ಹೇಳುತ್ತೇನೆ, ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ.


ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ನಾವು ಕಷ್ಟಗಳನ್ನನುಭವಿಸುವುದರಿಂದ ನಿಮಗೆ ಆದರಣೆಯೂ, ರಕ್ಷಣೆಯೂ ಉಂಟಾಗುತ್ತದೆ. ನಾವು ಸಮಾಧಾನದಿಂದಿರುವುದಾದರೆ ಅದರಿಂದ ನಿಮಗೆ ಆದರಣೆ ಆಗುತ್ತದೆ. ನಾವು ಅನುಭವಿಸುವಂಥ ಬಾಧೆಗಳನ್ನು ನೀವೂ ತಾಳ್ಮೆಯಿಂದ ಸಹಿಸಿಕೊಳ್ಳುವಂತೆ ಅದು ನಿಮ್ಮನ್ನು ಧೈರ್ಯಗೊಳಿಸುತ್ತದೆ.


ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು