Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಉಚಿತಾರ್ಥವಾಗಿ ಅನುಗ್ರಹಿಸಿದ ಕೆಲಸವನ್ನನುಸರಿಸಿ ನಾನು ಈ ಸುವಾರ್ತೆಗೆ ಸೇವಕನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ನೀಡಿದ ವಿಶೇಷವಾದ ಕೃಪಾವರದಿಂದ ನಾನು ಸುವಾರ್ತೆಯನ್ನು ತಿಳಿಸಲು ಸೇವಕನಾದೆನು. ದೇವರು ತನ್ನ ಶಕ್ತಿಯನ್ನು ಪ್ರಯೋಗಿಸಿ ನನಗೆ ಆ ಕೃಪಾವರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರ ಶಕ್ತಿಯ ಕ್ರಿಯೆಯಿಂದ ನನಗೆ ಕೊಡಲಾದ ಅವರ ದೇವ ಕೃಪಾದಾನಕ್ಕೆ ಅನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದೆವಾಚ್ಯಾ ವಿಶೆಸ್‍ ದೆನ್ಯಾ ವೈನಾ ಮಾಕಾ ಬರ್‍ಯಾ ಖಬ್ರೆಚೊ ಸೆವಕ್ ಕರುನ್ ಹೊಲೆ, ಹೆ ತೆನಿ ಮಾಕಾ ಅಪ್ನಾಚ್ಯಾ ಕಾಮಾ ಕರ್ತಲ್ಯಾ ಬಳಾ ವೈನಾ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:7
22 ತಿಳಿವುಗಳ ಹೋಲಿಕೆ  

ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ


ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.


ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.


ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.


ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು.


ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು.


ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು