Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸೌವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆನೆ ದಿತಲೊ ತೊಚ್ ತೊ ಉಲ್ಲ್ಯಾಕ್ನಿ ಅಪೊಸ್ತಲಾ, ಅನಿ ಉಲ್ಲ್ಯಾಕ್ನಿ ಪ್ರವಾದಿ, ಅನಿ ಉಲ್ಲ್ಯಾಕ್ನಿ ಬರಿ ಖಬರ್ ಸಾಂಗ್ತಲೆ ಅನಿ ಉಲ್ಲ್ಯಾಕ್ನಿ ತಾಂಡ್ಯಾಚಿ ಮುಖಂಡಾ ಅನಿ ಶಿಕ್ವುತಲೆ ಕರುನ್ ಎಚುನ್ ಕಾಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:11
19 ತಿಳಿವುಗಳ ಹೋಲಿಕೆ  

ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು.


ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”


ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.


ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.


ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.


ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.


ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.


ಪ್ರಿಯರೇ, ನೀವಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು