Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೇವಜನರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸಭೆಯ ಸೇವೆಗೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೋಸ್ಕರವೂ ಆತನು ಇವರನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕ್ರಿಸ್ತನ ದೇಹವನ್ನು ಕಟ್ಟುವುದಕ್ಕಾಗಿಯೂ ದೇವಜನರನ್ನು ಸೇವಾ ಕೆಲಸಕ್ಕಾಗಿ ಪರಿಣಿತರನ್ನಾಗಿ ಮಾಡುವುದಕ್ಕಾಗಿಯೂ ಕ್ರಿಸ್ತನು ಅವರನ್ನು ಕೊಟ್ಟ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ಸಗ್ಳೆ ತೆನಿ ಸೆವೆಚ್ಯಾ ಕಾಮಾ ಸಾಟ್ನಿ ದೆವಾಚ್ಯಾ ಲೊಕಾಕ್ನಿ ತಯಾರ್ ಕರುಕ್ ಮನುನ್ ಹೆಕಾ ಅಸೆ ಕರ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:12
45 ತಿಳಿವುಗಳ ಹೋಲಿಕೆ  

ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.


ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.


ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.


ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.


ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.


ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;


ಹಾಗೆಯೇ ನೀವು ಆತ್ಮೀಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.


ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.


ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.


ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.


ಅರ್ಖಿಪ್ಪನಿಗೆ, “ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ಎಚ್ಚರವಾಗಿದ್ದು ನೆರವೇರಿಸಬೇಕೆಂದು” ಹೇಳಿರಿ.


ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.


ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿರುವವರೆಂದು ಭಾವಿಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ, ನಾವು ಕ್ರಿಸ್ತನಲ್ಲಿದ್ದು ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಮಾತನಾಡುವವರಾಗಿದ್ದೇವೆ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ಆದ್ದರಿಂದ ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾದ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಈ ಸೇವೆಯು ಇನ್ನೆಷ್ಟು ಮಹಿಮೆಯಿಂದ ಇರಬೇಕಲ್ಲವೇ?


ಯಾಕೆಂದರೆ ನಾನು ಅನ್ಯಭಾಷೆಯಲ್ಲಿ ದೇವರನ್ನು ಪ್ರಾರ್ಥಿಸಿದರೆ ನನ್ನಾತ್ಮವು ಪ್ರಾರ್ಥಿಸುತ್ತಿರುತ್ತದೆ. ಆದರೆ ನನ್ನ ಬುದ್ಧಿಯು ನಿಷ್ಫಲವಾಗಿರುವುದು.


ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.


ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ಯೂದನು ನಮ್ಮೊಂದಿಗೆ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.”


ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.


ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,


ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.


ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ.


ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.


ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು