Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದಂದರೆ - ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಸೆ ಹೊವ್ನ್, ತುಮ್ಕಾ ಶಿಕ್ವಲ್ಲೆ ಕಾಯ್ ಮಟ್ಲ್ಯಾರ್, ತುಮಿ ತುಮ್ಚೆ ಅದ್ಲೊ ಬುರ್ಶೊ ಗುನ್ ಸೊಡುನ್ ದಿವ್ಚೆ ಮನುನ್ ಮಟ್ಲ್ಯಾರ್ ತುಮ್ಚೊ ಜನ್ನೊ ಸ್ವಬಾವ್ ಕಾಡುನ್ ಟಾಕುಚೆ ಮನ್ತಲೆ ಶಿಕುನ್ ಘೆಟ್ಲ್ಯಾಸಿ ಲೊಕಾ ಅಪ್ನಿ ಕರ್ತಲ್ಯಾ ಬುರ್ಶ್ಯಾ ಕಾಮಾಂಚ್ಯಾ ವೈನಾ ಪಸೆತ್ ಪಡಲ್ಯಾ ಸಾಟ್ನಿ ತೊ ಅದ್ಲೊ ಸ್ವಬಾವ್ ದಿಸ್ ಗೆಲೊಸೊ ಹಾಳ್ ಹೊಯ್ತ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:22
27 ತಿಳಿವುಗಳ ಹೋಲಿಕೆ  

ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.


ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.


ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.


ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.


ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.


ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.


ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.


ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.


ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.


ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.


ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.


ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.


ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.


ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”


ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.


ಏಲಿಯು, “ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೇ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟು ಹೋಗಲಿ” ಅಂದನು.


ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.


ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು