Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇಹವು ಒಂದೇ ಮತ್ತು ಆತ್ಮನು ಒಬ್ಬನೇ. ನೀವೆಲ್ಲರೂ ಒಂದೇ ನಿರೀಕ್ಷೆಯನ್ನು ಹೊಂದಿರಬೇಕೆಂದು ದೇವರು ನಿಮ್ಮನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮ್ಕಾ ಎಕುಚ್ ಬರೊಸೊ ದೆವಾಕ್ನಾ ಬಲ್ವಲ್ಲ್ಯಾ ತನ್ನಾ ಹೊತ್ತ್ಯಾ ಸಾರ್ಕೆ ಎಕುಚ್ ಆಂಗ್ ಅನಿ ಎಕುಚ್ ಪವಿತ್ರ್ ಆತ್ಮೊ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:4
28 ತಿಳಿವುಗಳ ಹೋಲಿಕೆ  

ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,


ಆದರೆ ಅಂಗಗಳು ಅನೇಕವಾಗಿದೆ ಆದರೆ ದೇಹವು ಒಂದೇ.


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.


ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.


ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.


ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.


ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?


ನಮ್ಮ ರಕ್ಷಕನಾದ ದೇವರ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು


ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.


ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ.


ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು.


ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.


ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.


ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು