Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕ್ರಿಸ್ತಯೇಸುವಿನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವು ಒಬ್ಬರಿಗೊಬ್ಬರು ವಿಧೇಯರಾಗಿರಬೇಕು. ಏಕೆಂದರೆ ನೀವು ಕ್ರಿಸ್ತನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಕ್ರಿಸ್ತನ ಭಯಭಕ್ತಿಯಲ್ಲಿ ಒಬ್ಬರಿಗೊಬ್ಬರು ಅಧೀನರಾಗಿ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತುಮಿ ಎಕಾಮೆಕಾಕ್ ಖಾಲ್ತಿ ಹೊವ್ನ್ ಚಲ್ತಲೆ ಹೊವ್ನ್ ರ್‍ಹಾವ್ಚೆ ಕಶ್ಯಾಕ್ ಮಟ್ಲ್ಯಾರ್, ತುಮಿ ಕ್ರಿಸ್ತಾಚೆ ಭ್ಹಿಂಯೆ ಅನಿ ದೆವಸ್ಪಾನ್ ಹೊತ್ತೆ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:21
20 ತಿಳಿವುಗಳ ಹೋಲಿಕೆ  

ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.


ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.


ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.


ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.


ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.


ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು.


ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.


ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.


ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.


ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.


ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು.


ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು.


ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು