Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದನ್ನು ಕಳಂಕ ಸುಕ್ಕು ಮುಂತಾದ್ದೊಂದೂ ಇಲ್ಲದ ಕನ್ನಿಕೆಯೋ ಎಂಬಂತೆ ಪರಿಶುದ್ಧವೂ ನಿರ್ದೋಷವೂ ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಹಿಮಾಪೂರ್ಣಳಾದ ಕನ್ನಿಕೆಯೋ ಎಂಬಂತಿರುವ ಸಭೆಯನ್ನು ತನಗೇ ಕೊಡಬೇಕೆಂದು ಆತನು ಪ್ರಾಣಕೊಟ್ಟನು. ಸಭೆಯು ದೋಷವಿಲ್ಲದೆ ಶುದ್ಧವಾಗಿರಬೇಕೆಂದು ಮತ್ತು ದುಷ್ಟತ್ವವಾಗಲಿ ಪಾಪವಾಗಲಿ ಅಥವಾ ಬೇರೆ ಯಾವುದೇ ತಪ್ಪಾಗಲಿ ಸಭೆಯಲ್ಲಿರಕೂಡದೆಂದು ಆತನು ಪ್ರಾಣಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಹಿಮೆನ್ ಭರಲ್ಲೆ ನಿಂಬೆಚೆಡು ಸಾರ್ಕೆ ಹೊತ್ತ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಅಪ್ನಾಕ್ ದಿವ್ಚೆ ಮನುನ್ ತೆನಿ ಅಪ್ಲೊ ಜಿವ್ ದಿಲ್ಯಾನ್, ತಾಂಡೊ ದೊಶ್ ನಸ್ತಾನಾ ಪವಿತ್ರ್ ಹೊವ್ನ್ ರ್‍ಹಾವ್ಚೆ ಮನುನ್ ಅನಿ ಬುರ್ಶ್ಯೆಪಾನ್ ಹೊಂವ್ದಿ ಚುಕ್ ಹೊಂವ್ದಿ ತಾಂಡ್ಯಾತ್ ರಾವ್ ನ್ಹಯ್ ಮನುನ್ ತೆನಿ ಅಪ್ಲೊ ಜಿವ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:27
21 ತಿಳಿವುಗಳ ಹೋಲಿಕೆ  

ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.


ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.


ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.


ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.


ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ಕೊರತೆಯೂ ಇಲ್ಲ.


ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.


ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.


ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ.


ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,


ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು