Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೊಲಸು ಮಾತುಗಳು, ಬರಡು ನುಡಿಗಳು, ಕುಚೋದ್ಯ ಪದಗಳು ಯಾವುವೂ ನಿಮಗೆ ತರವಲ್ಲ. ಪ್ರತಿಯಾಗಿ, ದೇವರಿಗೆ ನೀವು ಕೃತಜ್ಞತಾಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೊಲಸು ಮಾತು ಹುಚ್ಚು ಮಾತು ಕುಚೋದ್ಯ ಮಾತು ಇವು ಬೇಡ, ಅಯುಕ್ತವಾಗಿವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಲ್ಲದೆ ನಿಮ್ಮ ಮಧ್ಯದಲ್ಲಿ ಕೆಟ್ಟಮಾತುಗಳು ಇರಕೂಡದು. ನೀವು ಮೂರ್ಖತನದಿಂದ ಮಾತಾಡಕೂಡದು ಮತ್ತು ಹೊಲಸಾದ ಹಾಸ್ಯನುಡಿಗಳನ್ನು ಹೇಳಕೂಡದು. ಇವುಗಳು ನಿಮಗೆ ಯೋಗ್ಯವಾದವುಗಳಲ್ಲ. ಆದರೆ ನೀವು ದೇವರಿಗೆ ಸ್ತೋತ್ರ ಸಲ್ಲಿಸುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಶ್ಲೀಲತೆ, ಬುದ್ಧಿಹೀನ ಮಾತು, ಅಸಭ್ಯ ಹರಟೆ ಇವು ಬೇಡ, ಇವು ಅಯುಕ್ತವಾಗಿವೆ, ಪ್ರತಿಯಾಗಿ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತವ್ಡೆ ನಸ್ತಾನಾ ತುಮ್ಚ್ಯಾ ಮದ್ದಿ ಬುರ್ಶಿ ಬೊಲ್ನಿ ರ್‍ಹಾತಲಿ ನಕ್ಕೊ ತುಮಿ ಪಿಶೆಪಾನಾನ್ ಬೊಲುನಕಾಸಿ, ಅನಿ ಬುರ್ಶಿ ಗೊಸ್ಟಿಯಾ ಸಾಂಗುನಕಾಸಿ ಹೆ ತುಮ್ಕಾ ಬರೆ ದಿಸಿನಾ, ಖರೆ ತುಮಿ ದೆವಾಕ್ ಧನ್ಯವಾದ್ ಮನ್ತಲೆ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:4
29 ತಿಳಿವುಗಳ ಹೋಲಿಕೆ  

ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.


ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.


ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.


ಅಜ್ಞಾನಿಯ ಮಾತುಗಳು ಆರಂಭದಲ್ಲಿ ಬುದ್ಧಿಹೀನತೆ, ಅಂತ್ಯದಲ್ಲಿ ಅಪಾಯದ ಮರಳುತನ.


ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.


ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.


ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ.


ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.


ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.


ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.


ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ.


ವೃದ್ಧನೂ, ಈಗ ಕ್ರಿಸ್ತಯೇಸುವಿನ ನಿಮಿತ್ತ ಸೆರೆಯಾಳಾಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿಮಿತ್ತ ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.


ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಗಳಿಗಾಗಿ ದೇವರಿಗೆ ಅಷ್ಟೊಂದು ಸ್ತೋತ್ರ ಮಾಡುವುದು ನಮ್ಮಿಂದಾದಿತೇ?


ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ.


ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು


ಕೊಳ್ಳಿಗಳನ್ನೂ, ಅಂಬುಗಳನ್ನೂ, ಸಾವನ್ನೂ ಬೀರುವ, ದೊಡ್ಡ ಹುಚ್ಚನ ಹಾಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು