Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೈತಾನನು ನಿಮಗೆ ಒಡ್ಡುವ ಕುತಂತ್ರಗಳ ವಿರುದ್ಧ ಅಚಲರಾಗಿ ನಿಲ್ಲಲು ನೀವು ಸಮರ್ಥರಾಗುವಂತೆ ದೇವರು ನೀಡುವ ಸಕಲ ಶಸ್ತ್ರಾಸ್ತ್ರಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಆಗ ಸೈತಾನನ ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಡಲು ನಿಮಗೆ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಪಿಶಾಚನ ತಂತ್ರಗಳನ್ನು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆವಾಚಿ ಸಗ್ಳಿ ಹಾತಿಯಾರಾ ನೆಸುನ್ ಘೆವಾ, ತನ್ನಾ ಗಿರೊ ಕರ್ತಲ್ಯಾ ಕುತಂತ್ರಾಂಚ್ಯಾ ವಿರೊಧ್ ತುಮ್ಕಾ ಝಗ್ಡೊ ಕರುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:11
30 ತಿಳಿವುಗಳ ಹೋಲಿಕೆ  

ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.


ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.


ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.


ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.


ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ.


“ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.


ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,


ಆಗ ನಾನು ಜನರಿಗೆ ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು