Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಯನ್ನು ಮಾಡದಿರಿ. ಕ್ರಿಸ್ತಯೇಸುವಿನ ದಾಸರಂತೆ ದೈವೇಚ್ಛೆಯನ್ನು ಹೃದಯಪೂರ್ವಕವಾಗಿ ಈಡೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರ ಮೆಚ್ಚಿಕೆಯನ್ನು ಗಳಿಸಿಕೊಳ್ಳಬೇಕೆಂದು ಅವರು ಗಮನಿಸುತ್ತಿರುವಾಗ ಮಾತ್ರ ಸೇವೆ ಮಾಡದೆ ನೀವು ಕ್ರಿಸ್ತನಿಗೆ ವಿಧೇಯರಾಗಿರುವಂತೆ ಅವರಿಗೆ ವಿಧೇಯರಾಗಿರಬೇಕು. ದೇವರಿಗೆ ಇಷ್ಟವಾದದ್ದನ್ನು ನೀವು ಪೂರ್ಣಹೃದಯದಿಂದ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಂಚ್ಯಾಕ್ನಾ ಹೊಗ್ಳಾಪ್ ಘೆವ್ಚೆ ಮನುನ್ ತೆನಿ ತುಮ್ಕಾ ಬಗಿತ್ ರಾತಾನಾ ತವ್ಡೆಚ್ ಕಾಮ್ ಕರುನ್ ದಾಕ್ವುನಕಾಸಿ, ತುಮಿ ಕ್ರಿಸ್ತಾಕ್ ಖಾಲ್ತಿ ಹೊವ್ನ್ ಹೊತ್ತ್ಯಾ ಸಾರ್ಕೆ ತೆಂಕಾಬಿ ಖಾಲ್ತಿ ಹೊವ್ನ್ ರ್‍ಹಾವ್ಚೆ, ದೆವಾಕ್ ಬರೆ ದಿಸ್ತಲೆ ಕಾಮ್ ತುಮಿ ಫುರಾ ಮನಾನ್ ಕರುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:6
20 ತಿಳಿವುಗಳ ಹೋಲಿಕೆ  

ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.


ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.


ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.


ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.


ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,


“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.


ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.


ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,


ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.


ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.


ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.


ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.


ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.


ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.


ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು