Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಾಸ್ಯದಲ್ಲಿರುವವನಾಗಲಿ, ಸ್ವತಂತ್ರವುಳ್ಳವನಾಗಿರಲಿ ಸತ್ಕಾರ್ಯವನ್ನು ಮಾಡುವವನು ಪ್ರಭುವಿನಿಂದ ತಕ್ಕ ಪ್ರತಿಫಲವನ್ನು ಪಡೆದೇ ತೀರುವನೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾಕಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬನಿಗೂ ದೇವರು ಪ್ರತಿಫಲವನ್ನು ಕೊಡುತ್ತಾನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ಪ್ರತಿಯೊಬ್ಬ ವ್ಯಕ್ತಿಯು ಅವನು ಸೇವಕನಾಗಿರಲಿ ಅಥವಾ ಸ್ವತಂತ್ರನಾಗಿರಲಿ ತಾನು ಮಾಡುವ ಒಳ್ಳೆಯ ಕಾರ್ಯಗಳಿಗೆ ಪ್ರತಿಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್, ಗುಲಾಮಾಕ್ನಿ ಹೊಂವ್ದಿತ್, ಯಜಮಾನಾಕ್ನಿ ಹೊಂವ್ದಿತ್, ಧನಿ ತೆನಿ ಕರಲ್ಲ್ಯಾ ಬರ್‍ಯಾ ಕಾಮಾಕ್ನಿ ಪ್ರತಿ ಫಳ್ ದಿತಾ ಮನ್ತಲೆ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:8
20 ತಿಳಿವುಗಳ ಹೋಲಿಕೆ  

ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.


ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”


ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.


ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.


ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.


ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.


ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು