Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಳನೆಯ ದಿನ ಅರಸ ಅಹಷ್ವೇರೋಷನು ಮಧುಪಾನ ಮಾಡಿ ಆನಂದ ಲಹರಿಯಲ್ಲಿದ್ದಾಗ ಬಹುಸುಂದರಿಯಾದ ತನ್ನ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಏಳನೆಯ ದಿನದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸಪಾನಮಾಡಿ ಆನಂದಲಹರಿಯಲ್ಲಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10-11 ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10-11 ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:10
16 ತಿಳಿವುಗಳ ಹೋಲಿಕೆ  

ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು.


ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.


ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.


ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.


ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.


ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ಪುನಃ ಅವನಿಗೆ, “ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು;


ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು, ಕಾಲ್ಬದಿಯಲ್ಲಿ ಮಲಗಿದಳು.


ವಷ್ಟಿ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು.


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.


ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು