Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ತನ್ನ ಎಲ್ಲಾ ಸರದಾರರಿಗೂ ಮತ್ತು ಪರಿವಾರದವರಿಗೂ ಎಸ್ತೇರಳ ಔತಣ ಎಂದು ದೊಡ್ಡ ಔತಣವನ್ನು ಮಾಡಿಸಿ, ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ, ರಾಜರ ಘನತೆಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ತನ್ನ ಎಲ್ಲಾ ಪದಾಧಿಕಾರಿಗಳಿಗೂ ಪರಿವಾರದವರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ಭಾರಿ ಔತಣವನ್ನೇರ್ಪಡಿಸಿದನು. ತನ್ನ ಎಲ್ಲಾ ಸಂಸ್ಥಾನಗಳಲ್ಲಿ, ಸೆರೆಯಲ್ಲಿದ್ದ ಬಂಧಿತರಿಗೆ ಬಿಡುಗಡೆಯನ್ನು ಘೋಷಿಸಿದನು. ರಾಜಮರ್ಯಾದೆಗೆ ತಕ್ಕಂತೆ ಪ್ರಜೆಗಳಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತನ್ನ ಎಲ್ಲಾ ಸರದಾರರಿಗೂ ಪರಿವಾರದವರಿಗೂ ಎಸ್ತೇರಳ ಔತಣವೆಂದು ದೊಡ್ಡ ಔತಣವನ್ನು ಮಾಡಿಸಿ ಎಲ್ಲಾ ಸಂಸ್ಥಾನಗಳಲ್ಲಿಯೂ ಸೆರೆಯವರನ್ನು ಬಿಡಿಸಿ ರಾಜರಿಗೆ ತಕ್ಕಂತೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಸ್ತೇರಳಿಗೆ ರಾಜನು ಒಂದು ದೊಡ್ಡ ಔತಣವನ್ನೇರ್ಪಡಿಸಿ ಅದಕ್ಕೆ ರಾಜ್ಯದ ಮುಖ್ಯ ಅಧಿಕಾರಿಗಳನ್ನೂ ನಾಯಕರನ್ನೂ ಆಮಂತ್ರಿಸಿ, ರಾಜ್ಯದಲ್ಲೆಲ್ಲಾ ಒಂದು ದಿವಸದ ರಜೆಯನ್ನು ಘೋಷಿಸಿದನು; ಮತ್ತು ಜನರಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಎಲ್ಲಾ ಪ್ರಾಂತಗಳಿಗೂ ರಜೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:18
14 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಅದೇನೆಂದರೆ, “ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು


“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಚೀಯೋನಿನ ಮಹಿಳೆಯರೇ, ಹೊರಟು ಬನ್ನಿ ರಾಜನಾದ ಸೊಲೊಮೋನನನ್ನು ನೋಡ ಬನ್ನಿ. ಅವನು ವಿವಾಹ ದಿನದ ಉತ್ಸವದಂದು ಆತನ ತಾಯಿ ಆತನಿಗೆ ತೊಡಿಸಿದ ಕಿರೀಟವನ್ನು ಆತ ಧರಿಸಿರುವುದನ್ನು ನೋಡಬನ್ನಿ!


ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.


ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.


ಲೇವಿಯರೂ ಜನರಿಗೆ, “ಸುಮ್ಮನಿರಿ, ಇದು ದೇವರ ಪರಿಶುದ್ಧ ದಿನ, ದುಃಖಿಸಬೇಡಿರಿ” ಎಂದು ಹೇಳಿ ಜನರನ್ನು ಸಂತೈಸಿದರು.


ನಿನ್ನ ಆಳುಗಳನ್ನು ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಕೊಡು’ ಎಂದು ಹೇಳಿರಿ” ಎಂದು ಅವರನ್ನು ಕಳುಹಿಸಿದನು.


ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರೆಸಿ ಔತಣವನ್ನು ಮಾಡಿಸಿದನು.


ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು