Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೇಗೈಯು ಆಕೆಯನ್ನು ಮೆಚ್ಚಿ, ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನದ್ರವ್ಯಗಳನ್ನೂ ಮತ್ತು ಭೋಜನವನ್ನು ಒದಗಿಸಿದನು. ಅವನು ಆಕೆಗೊಸ್ಕರ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಆರಿಸಿಕೊಂಡು ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಎಸ್ತೇರಳು ಹೇಗೈಯನ ಮೆಚ್ಚುಗೆಯನ್ನು ಗಳಿಸಿ ಅವನ ದಯೆಗೆ ಪಾತ್ರಳಾದಳು. ಈ ಕಾರಣದಿಂದ ಅವನು ಆಕೆಗೆ ತಕ್ಕ ಸೌಂದರ್ಯವರ್ಧಕ ಲೇಪನದ್ರವ್ಯಗಳನ್ನು ಹಾಗು ಉತ್ತಮ ಭೋಜನಾಂಶವನ್ನು ಕೊಟ್ಟು, ಆಕೆಯನ್ನೂ ಆಕೆಯ ಸೇವೆಗೆ ಆರಿಸಿದ ಏಳುಮಂದಿ ದಾಸಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೇಗೈಯು ಆಕೆಯನ್ನು ಮೆಚ್ಚಿ ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನ ದ್ರವ್ಯಗಳನ್ನೂ ಭೋಜನಾಂಶವನ್ನೂ ಆರಿಸಿದ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಬೇಗನೆ ಏರ್ಪಡಿಸಿ ಆಕೆಯನ್ನೂ ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮಭಾಗದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೇಗೈ ಎಸ್ತೇರಳನ್ನು ಇಷ್ಟಪಟ್ಟನು. ಆಕೆ ಅವನ ಮೆಚ್ಚಿಗೆಗೆ ಪಾತ್ರಳಾದಳು. ಆಕೆಗೆ ಅರಮನೆಯಿಂದ ಏಳು ಮಂದಿ ಸೇವಕಿಯರನ್ನು ಕೊಟ್ಟು ಆಕೆಯ ಊಟೋಪಚಾರಗಳಲ್ಲಿ ಅಥವಾ ಸೌಂದರ್ಯ ಅಭಿವೃದ್ಧಿಗಾಗಿ ಲೇಪನ ವಸ್ತುಗಳ ವಿಷಯದಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದನು. ಇದಾದ ಬಳಿಕ ಎಸ್ತೇರ್ ಮತ್ತು ಆಕೆಯ ಸೇವಕಿಯರನ್ನು ಅಂತಃಪುರದ ಉತ್ತಮ ಭಾಗದಲ್ಲಿ ಇಳಿದುಕೊಳ್ಳುವ ವ್ಯವಸ್ಥೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎಸ್ತೇರಳು ಹೇಗೈಯ ಮೆಚ್ಚುಗೆಯನ್ನು ಗಳಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆ ದೊರಕಿತು. ಆದಕಾರಣ ಅವನು ತ್ವರೆಯಾಗಿ ಸೌಂದರ್ಯವರ್ಧಕ ಸಾಧನಗಳನ್ನೂ ಅರಸನ ಅರಮನೆಯಿಂದ ಏಳುಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರಿದ್ದ ಕೋಣೆಯಲ್ಲಿ ಉತ್ತಮವಾದ ಭೋಜನಾಂಶಗಳನ್ನು ಅವಳಿಗೂ ಅವಳ ದಾಸಿಯರಿಗೂ ಕೊಟ್ಟನು. ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:9
12 ತಿಳಿವುಗಳ ಹೋಲಿಕೆ  

ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.


ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.


ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ, ಪರಿಮಳದ್ರವ್ಯ ಕಾಂತಿವರ್ಧಕದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಳಗಳೂ ಅಂತು ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜನ ಅರಮನೆಯ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗಬೇಕಾಗಿತ್ತು.


ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರ್ಯನಿರ್ವಾಹಕರನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ, ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ. ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ.


ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.


ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.


ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.


ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.


ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು.


ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು