Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸನ ಆಜ್ಞಾನುಸಾರ ಅರಮನೆಯಲ್ಲಿದ್ದ ಪರಿಚಾರಕರೆಲ್ಲರೂ ಅವನಿಗೆ ನಮಸ್ಕರಿಸುತ್ತಿದ್ದರು. ಆದರೆ ಮೊರ್ದೆಕೈ ಮಾತ್ರ ಹಾಗೆ ಮಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಸನು - ರಾಜನಿವೇಶನದಲ್ಲಿರುವ ರಾಜಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗ ನಮಸ್ಕಾರಮಾಡಬೇಕೆಂದು ಅಪ್ಪಣೆಮಾಡಿದ್ದರಿಂದ ಎಲ್ಲರೂ ಹಾಗೆ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರಾಜ್ಯದ ಎಲ್ಲಾ ಅಧಿಕಾರಿಗಳೂ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿದ್ದವರೆಲ್ಲರೂ ಅವನಿಗೆ ಅಡ್ಡಬೀಳುತ್ತಿದ್ದರು. ಇದು ರಾಜಾಜ್ಞೆಯಾಗಿತ್ತು. ಆದರೆ ಮೊರ್ದೆಕೈ ಮಾತ್ರ ಅವನಿಗೆ ಅಡ್ಡಬೀಳಲೂ ಇಲ್ಲ ಗೌರವಿಸಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದಕಾರಣ ಅರಮನೆಯ ಬಾಗಿಲಲ್ಲಿರುವ ಅರಸನ ಸಮಸ್ತ ಸೇವಕರು ಬಗ್ಗಿ ಹಾಮಾನನಿಗೆ ಅಡ್ಡಬೀಳುತ್ತಿದ್ದರು. ಏಕೆಂದರೆ ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು. ಆದರೆ ಮೊರ್ದೆಕೈಯು ಬಗ್ಗದೆ ಅಡ್ಡಬೀಳದೆಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:2
15 ತಿಳಿವುಗಳ ಹೋಲಿಕೆ  

ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,


ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.


ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.


ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.


ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು.


ಎರಡನೆಯ ಬಾರಿ ಕನ್ಯೆಯರನ್ನು ಸೇರಿಸುತ್ತಿದ್ದಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.


ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.


ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.


ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.


ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.


ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬ ಒಬ್ಬ ಯೆಹೂದ್ಯ ಮನುಷ್ಯನು ವಾಸಮಾಡುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗೀಯ ಮೊಮ್ಮಗನೂ, ಯಾಯೀರನ ಮಗನೂ ಆಗಿದ್ದನು.


ಅರಮನೆಯ ದ್ವಾರಪಾಲಕರು ಮೊರ್ದೆಕೈಗೆ, “ನೀನು ರಾಜಾಜ್ಞೆಯನ್ನು ಮೀರುವುದೇಕೆ?” ಎಂದು ಪ್ರತಿದಿನ ಅವನನ್ನು ಎಚ್ಚರಿಸುತ್ತಿದ್ದರು.


ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು