Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೊರ್ದೆಕೈಯು ತಾನು ಯೆಹೂದ್ಯನೆನ್ನುವ ಹೆಮ್ಮೆಯ ಹಾಗೂ ಮಾನವನಿಗೆ ಸಾಷ್ಟಾಂಗನಮಸ್ಕಾರ ಮಾಡುವುದಿಲ್ಲ ಎಂಬ ಅವನ ಹಟ ಸಾಗುವುದೇನೋ ನೋಡೋಣ ಎಂದುಕೊಂಡು ಅವರು ಅದನ್ನು ಹಾಮಾನನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗೆ ಅವರು ಪ್ರತಿದಿನ ಅವನಿಗೆ ಹೇಳಿದರೂ ಅವನು ಅವರ ಮಾತಿಗೆ ಕಿವಿಗೊಡಲಿಲ್ಲ. ತಾನು ಯೆಹೂದ್ಯನೆಂದು ಹೇಳಿಕೊಳ್ಳುತ್ತಿದ್ದ ಮೊರ್ದೆಕೈಯ ಹಟವು ಎಲ್ಲಿಯವರೆಗೆ ಸಾಗುವುದೊ ನೋಡಿಯೇ ಬಿಡಬೇಕೆಂದು ಅವನ ಈ ವರ್ತನೆಯ ಬಗ್ಗೆ ಹಾಮಾನನಿಗೆ ದೂರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದಿನಂಪ್ರತಿ ಅವನನ್ನು ಎಚ್ಚರಿಸಿದರೂ ಅವನು ಮಣಿಯಲಿಲ್ಲ. ಆದದರಿಂದ ಅವರು - ತಾನು ಯೆಹೂದ್ಯನೆನ್ನುವ ಮೊರ್ದೆಕೈಯ ಹೆಮ್ಮೆಯ ಹಟವು ಸಾಗುವದೇನೋ ನೋಡೋಣ ಎಂದುಕೊಂಡು ಅದನ್ನು ಹಾಮಾನನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿದಿನ ಆ ಅಧಿಕಾರಿಗಳು ಮೊರ್ದೆಕೈಗೆ ಹೇಳಿದರೂ ಅವನು ಹಾಮಾನನಿಗೆ ಅಡ್ಡಬೀಳಲೂ ಇಲ್ಲ, ಗೌರವಿಸಲೂ ಇಲ್ಲ. ಈ ವಿಷಯವನ್ನು ಅಧಿಕಾರಿಗಳು ಹಾಮಾನನಿಗೆ ತಿಳಿಸಿದರು. ಮೊರ್ದೆಕೈಗೆ ಹಾಮಾನನು ಮಾಡುವದನ್ನು ನೋಡಲು ಕಾದಿದ್ದರು. ಮೊರ್ದೆಕೈ ಅವರಿಗೆ ತಾನು ಯೆಹೂದ್ಯನೆಂದು ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಪ್ರತಿದಿನ ಅವನಿಗೆ ಹೇಳಿದರೂ ಅವನು ಅವರ ಮಾತಿಗೆ ಕಿವಿಗೊಡಲಿಲ್ಲ. ತಾನು ಯೆಹೂದ್ಯನೆಂದು ಅವರಿಗೆ ಹೇಳಿಕೊಳ್ಳುತ್ತಿದ್ದ ಮೊರ್ದೆಕೈಯ ನಡವಳಿಕೆಯನ್ನು ಸಹಿಸಬಹುದೋ ಎಂದು ಕಾಣಲು ಅವರು ಹಾಮಾನನಿಗೆ ದೂರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:4
11 ತಿಳಿವುಗಳ ಹೋಲಿಕೆ  

ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ.


ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ,


ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.


ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.


ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.


ಅರಮನೆಯ ದ್ವಾರಪಾಲಕರು ಮೊರ್ದೆಕೈಗೆ, “ನೀನು ರಾಜಾಜ್ಞೆಯನ್ನು ಮೀರುವುದೇಕೆ?” ಎಂದು ಪ್ರತಿದಿನ ಅವನನ್ನು ಎಚ್ಚರಿಸುತ್ತಿದ್ದರು.


ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು