Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇಮಿಸಲ್ಪಟ್ಟಿದ್ದ ಹತಾಕನೆಂಬ ರಾಜ ಕಂಚುಕಿಯನ್ನು ಕರೆಯಿಸಿ, “ನೀನು ಮೊರ್ದೆಕೈಯ ಬಳಿಗೆ ಹೋಗಿ, ಇದಕ್ಕೆ ಕಾರಣವೇನು ಎಂದು ವಿಚಾರಿಸಿಕೊಂಡು ಬಾ” ಎಂದು ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಎಸ್ತೇರಳು ತನ್ನ ಸೇವೆಗಾಗಿ ನೇಮಿಸಲಾಗಿದ್ದ ರಾಜಕಂಚುಕಿಗಳಲ್ಲಿ ಒಬ್ಬನಾದ ಹತಾಕನನ್ನು ಕರೆದು, ಮೊರ್ದೆಕೈ ಬಳಿಗೆ ಕಳುಹಿಸಿ, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ಈ ವರ್ತನೆಗೆ ಕಾರಣವಾದರೂ ಯಾವುದೆಂದು ವಿಚಾರಿಸಿಕೊಂಡು ಬರುವಂತೆ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇವಿುಸಲ್ಪಟ್ಟಿದ್ದ ಹತಾಕನೆಂಬ ರಾಜಕಂಚುಕಿಯನ್ನು ಕರಿಸಿ - ನೀನು ಮೊರ್ದೆಕೈಯ ಬಳಿಗೆ ಹೋಗಿ ಇದೇನು, ಯಾಕೆ ಎಂದು ವಿಚಾರಿಸಿಕೊಂಡು ಬಾ ಎಂದು ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಎಸ್ತೇರಳು ಹತಾಕನನ್ನು ಬರಹೇಳಿದಳು. ಹತಾಕನು ರಾಜಕಂಚುಕಿಯಾಗಿದ್ದು ಎಸ್ತೇರ್ ರಾಣಿಯ ಸೇವೆಯನ್ನು ಮಾಡುವವನಾಗಿದ್ದನು. ಹತಾಕನಿಗೆ ಹೋಗಿ ಮೊರ್ದೆಕೈಗೆ ಏನು ತೊಂದರೆಯಾಯಿತು; ಅವನು ಯಾತಕ್ಕಾಗಿ ದುಃಖತಪ್ತನಾಗಿದ್ದಾನೆ ಎಂಬುದನ್ನು ವಿಚಾರಿಸಿಕೊಂಡು ಬರಲು ಆಜ್ಞಾಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಎಸ್ತೇರಳು ತನ್ನ ಬಳಿಯಲ್ಲಿ ಸೇವೆಗಾಗಿ ನೇಮಿಸಲಾಗಿದ್ದ ಅರಸನ ರಾಜಕಂಚುಕಿಯರಲ್ಲಿ ಹತಾಕನನ್ನು ಕರೆದು, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ವರ್ತನೆಗೆ ಕಾರಣವನ್ನೂ ಅವನಿಂದ ತಿಳಿದುಕೊಂಡು ಬರಬೇಕೆಂದು ಆಜ್ಞಾಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:5
10 ತಿಳಿವುಗಳ ಹೋಲಿಕೆ  

ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.


ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,


ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.


ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಈ ವಿಚಾರವನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ, “ಗೋಣಿತಟ್ಟನ್ನು ತೆಗೆದುಬಿಟ್ಟು, ಇವುಗಳನ್ನು ಧರಿಸಿಕೋ” ಎಂದು ಹೇಳಿಕಳುಹಿಸಿದಳು. ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.


ಹತಾಕನು ಅರಮನೆಯ ಬಾಗಿಲಿನ ಮುಂದಿರುವ ಪಟ್ಟಣದ ಬಯಲಿಗೆ ಮೊರ್ದೆಕೈಯ ಹತ್ತಿರ ಹೋದನು.


ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಿದನು.


ಎಸ್ತೇರಳು ಅವನನ್ನು ಪುನಃ ಮೊರ್ದೆಕೈಯ ಬಳಿಗೆ ಕಳುಹಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು