Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅರಸನು ಆಕೆಗೆ, “ಎಸ್ತೇರ್‍ರಾಣಿಯೇ, ನಿನ್ನ ಅಪೇಕ್ಷೆ ಏನು? ನಿನ್ನ ವಿಜ್ಞಾಪನೆ ಏನು? ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅರಸನು ಆಕೆಗೆ ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವದು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಎಸ್ತೇರ್ ರಾಣಿಯೇ, ಯಾವುದು ನಿನ್ನ ಮನಸ್ಸನ್ನು ಭಾದಿಸುತ್ತದೆ? ನನ್ನನ್ನು ಏನು ಕೇಳಲು ಬಂದಿರುವಿ? ಕೇಳು, ನಾನು ನಿನಗೆ ಅರ್ಧ ರಾಜ್ಯವನ್ನು ಕೇಳಿದರೂ ಕೊಡುವೆನು” ಎಂದು ರಾಜನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅರಸನು ಅವಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:3
11 ತಿಳಿವುಗಳ ಹೋಲಿಕೆ  

ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.


ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಎಂದು ಹೇಳಿದನು.


ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನೂ, ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಜನರು ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವುದಿದ್ದರೂ ನೆರವೇರುವುದು, ನೀನು ಏನು ಕೇಳಿಕೊಂಡರೂ ಕೊಡುವೆನು” ಎಂದು ಹೇಳಿದನು.


ದ್ರಾಕ್ಷಾರಸ ಪಾನಮಾಡುವಾಗ ಅರಸನು ತಿರುಗಿ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಅಂದನು.


ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು,


ಆಗ ಆಕೆಯು, “ಒಂದು ಸಣ್ಣ ಬಿನ್ನಹ ಉಂಟು. ಅದನ್ನು ತಿರಸ್ಕರಿಸಬೇಡ” ಎಂದು ಹೇಳಿದಳು. ಅರಸನು, “ನನ್ನ ತಾಯಿಯೇ ಏನು ಬೇಕು ಕೇಳು, ನಾನು ಆಗದು ಅನ್ನುವುದಿಲ್ಲ” ಎಂದನು.


ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.


ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು.


ಆಗ ಅರಸನು, “ನಿನ್ನ ಅಪೇಕ್ಷೆಯೇನು” ಎಂದು ನನ್ನನ್ನು ಕೇಳಿದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ,


ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು