Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಬಾಗಿಲಲ್ಲಿ ಕುಳಿತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು. ನೀನು ಸಲಹೆ ಮಾಡಿದವುಗಳಲ್ಲಿ ಒಂದನ್ನೂ ಬಿಡದೆ, ಚಾಚೂತಪ್ಪದೆ ನೆರವೇರಿಸು,” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೂಡಲೆ ಅರಸನು ಹಾಮಾನನಿಗೆ - ನೀನು ಹೇಳಿದ ವಸ್ತ್ರಗಳನ್ನೂ ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಲಿನಲ್ಲಿ ಕೂತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈಗಲೇ,” ಅರಸನು ಹಾಮಾನನಿಗೆ ಆಜ್ಞೆಕೊಟ್ಟು “ಈಗಲೇ ಹೋಗಿ ರಾಜವಸ್ತ್ರಗಳನ್ನೂ ರಾಜನ ಕುದುರೆಯನ್ನೂ ಕೊಂಡುಹೋಗಿ ಯೆಹೂದ್ಯನಾದ ಮೊರ್ದೆಕೈಗೆ ನೀನು ಹೇಳಿದ ಪ್ರಕಾರವೆ ಮಾಡು. ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಂಡಿರುತ್ತಾನೆ. ನಿನ್ನ ಸಲಹೆಯಂತೆಯೇ ಎಲ್ಲವನ್ನೂ ಮಾಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಹಾಗೆಯೇ ಮಾಡು. ನೀನು ಸಲಹೆಮಾಡಿದ್ದರಲ್ಲಿ ಒಂದನ್ನೂ ಬಿಡದೆ, ಎಲ್ಲವನ್ನೂ ಮಾಡು,” ಎಂದು ಹಾಮಾನನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:10
7 ತಿಳಿವುಗಳ ಹೋಲಿಕೆ  

ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.


ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಇಗೋ, ಯೆಹೋವನ ವಾಕ್ಯವು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೇ” ಎಂದು ಹೇಳಿದನು.


ಆ ವಸ್ತ್ರಗಳನ್ನೂ ಕುದುರೆಯನ್ನೂ ಪ್ರಧಾನರಾದ ಅರಸನ ಸರದಾರರಲ್ಲೊಬ್ಬನ ವಶಕ್ಕೆ ಕೊಟ್ಟು, ಅರಸನು ಸನ್ಮಾನಿಸಬೇಕೆಂದಿರುವ ಪುರುಷನಿಗೆ ಆ ರಾಜವಸ್ತ್ರಗಳನ್ನು ಹಾಕಿಸಬೇಕು. ಅನಂತರ ಅವನನ್ನು ಆ ಕುದುರೆಯ ಮೇಲೆ ಕುಳ್ಳಿರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸುತ್ತಾ ಅವನ ಮುಂದೆ, ‘ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ’ ಎಂದು ಪ್ರಕಟಣೆ ಮಾಡಿಸಬೇಕು” ಎಂದು ಹೇಳಿದನು.


ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊರ್ದೆಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ” ಎಂದು ಪ್ರಕಟಣೆಮಾಡಿಸಿದನು.


ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; ನಿಮ್ಮ ಹೃದಯವು ಧೈರ್ಯದಿಂದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು