Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊರ್ದೆಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ” ಎಂದು ಪ್ರಕಟಣೆಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೇರೆ ವಿಧಿಯಿಲ್ಲದೆ ಹಾಮಾನನು ಹೊರಟು ಆ ವಸ್ತ್ರಗಳನ್ನು, ಕುದುರೆಯನ್ನು ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ,” ಎಂದು ಪ್ರಕಟಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹಾಮಾನನು ಆ ವಸ್ತ್ರಗಳನ್ನೂ ಕುದುರೆಯನ್ನೂ ತೆಗೆದುಕೊಂಡು ಬಂದು ಮೊರ್ದೆಕೈಯನ್ನು ಭೂಷಿಸಿ ಪಟ್ಟಣದ ಮಧ್ಯದಲ್ಲಿ ಮೆರವಣಿಗೆಮಾಡಿಸಿ ಅವನ ಮುಂದೆ - ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ ಎಂದು ಪ್ರಕಟಣೆ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹಾಮಾನನು ಉಡುಪನ್ನೂ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ತೊಡಿಸಿ, ಕುದುರೆಯ ಮೇಲೆ ಕುಳ್ಳಿರಿಸಿ ನಗರದ ಮುಖ್ಯರಸ್ತೆಗಳಲ್ಲಿ ಕರೆದುಕೊಂಡು ಹೋಗುತ್ತಿರುವಾಗ, “ಅರಸನು ಸನ್ಮಾನಿಸುವ ಮನುಷ್ಯನಿಗೆ ಹೀಗೆಯೇ ಆಗುವದು” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಹಾಮಾನನು ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಗೌರವಿಸುವ ರೀತಿ ಇದೇ!” ಎಂದು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:11
9 ತಿಳಿವುಗಳ ಹೋಲಿಕೆ  

ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ, ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.


ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.


ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು.


ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.


ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟಿದ್ದರಿಂದ ಹೊಳೆಯ ಈಚೆಯ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಮತ್ತು ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು.


ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ” ಎಂದು ಅಪ್ಪಣೆಮಾಡಿದನು.


ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.


ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು, ಯಜಮಾನನ ಮಾತಿನಂತೆ ನಡೆಯುವವನು ಸನ್ಮಾನವನ್ನು ಅನುಭವಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು