Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೊರ್ದೆಕೈ, ಪುನಃ ಅರಮನೆಯ ಬಾಗಿಲಿಗೆ ಬಂದನು. ಹಾಮಾನನಾದರೋ ವ್ಯಸನಕ್ರಾಂತನಾಗಿ ಮುಖ ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಧಾವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೊರ್ದೆಕೈಯು ತಿರಿಗಿ ಅರಮನೆಯ ಬಾಗಲಿಗೆ ಹೋದನು. ಹಾಮಾನನಾದರೋ ಶೋಕಾರ್ತನಾಗಿ ಮೋರೆಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದಾದ ಬಳಿಕ ಮೊರ್ದೆಕೈ ಹೆಬ್ಬಾಗಿಲ ಬಳಿಯಲ್ಲಿದ್ದ ತನ್ನ ಸ್ಥಾನಕ್ಕೆ ಹೋದನು. ಆದರೆ ಹಮಾನನು ತನ್ನ ಮನೆಗೆ ಅವಸರವಸರವಾಗಿ ನಡೆದನು. ನಾಚಿಕೆಯಿಂದಲೂ ಸಿಟ್ಟಿನಿಂದಲೂ ತನ್ನ ಮುಖವನ್ನು ಮುಚ್ಚಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅನಂತರ ಮೊರ್ದೆಕೈ ಪುನಃ ಅರಮನೆಯ ಬಾಗಿಲಿಗೆ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆಯನ್ನು ಮುಚ್ಚಿಕೊಂಡು ತನ್ನ ಮನೆಗೆ ಶೀಘ್ರವಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:12
14 ತಿಳಿವುಗಳ ಹೋಲಿಕೆ  

ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.


ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?


“ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.


ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?


ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು.


ಎರಡನೆಯ ಬಾರಿ ಕನ್ಯೆಯರನ್ನು ಸೇರಿಸುತ್ತಿದ್ದಾಗ ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.


ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.


ಆಗ ಇಸ್ರಾಯೇಲರ ಅರಸನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಅನಂತರ ಸಮುವೇಲನು ಮಲಗಿ ಮುಂಜಾನೆಯಲ್ಲೇ ಎದ್ದು ಯೆಹೋವನ ಮಂದಿರದ ಬಾಗಿಲುಗಳನ್ನು ತೆರೆದನು. ಅವನು ತಾನು ಕಂಡದ್ದನ್ನು ಏಲಿಗೆ ತಿಳಿಸುವುದಕ್ಕೆ ಭಯಪಟ್ಟನು.


ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊರ್ದೆಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ” ಎಂದು ಪ್ರಕಟಣೆಮಾಡಿಸಿದನು.


ಅವನು, “ನಾನು ಇಜ್ರೇಲಿನವನಾದ ನಾಬೋತನಿಗೆ ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಮಾರಿಬಿಡು, ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿತೋಟವನ್ನು ಕೊಡುತ್ತೇನೆ’ ಎಂಬುದಾಗಿ ಹೇಳಿದೆನು. ಆದರೆ ಅವನು ಕೊಡುವುದಿಲ್ಲ ಎಂದನು” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು