ಎಸ್ತೇರಳು 6:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕೂಡಲೆ ಅರಸನು, “ಯಾರಲ್ಲಿ, ಅಂಗಳದಲ್ಲಿ?” ಎಂದು ವಿಚಾರಿಸಿದನು. ಅಷ್ಟರಲ್ಲಿ, ತಾನೇ ಸಿದ್ಧಮಾಡಿಸಿದ್ದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಅಪ್ಪಣೆಯನ್ನು ಪಡೆಯುವುದಕ್ಕೋಸ್ಕರ ಹಾಮಾನನು ಆಗತಾನೆ ಅರಮನೆಯ ಹೊರಗಣ ಅಂಗಳಕ್ಕೆ ಬಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅರಸನು - ಪ್ರಾಕಾರದಲ್ಲಿ ಯಾರಿದ್ದಾರೆ ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನೇ ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವದಕ್ಕೆ ಅರಸನ ಅಪ್ಪಣೆಪಡಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದೇ ಸಮಯದಲ್ಲಿ ಹಾಮಾನನು ಹೊರಾಂಗಣದಲ್ಲಿದ್ದನು. ಅವನು ತಾನು ತಯಾರಿಸಿಟ್ಟಿರುವ ಗಲ್ಲುಕಂಬದಲ್ಲಿ ಮೊರ್ದೆಕೈಯನ್ನು ಗಲ್ಲಿಗೆ ಹಾಕಲು ಅರಸನಿಂದ ಅಪ್ಪಣೆ ಪಡೆದುಕೊಳ್ಳಲು ಬಂದಿದ್ದನು. ಅರಸನು ಹೊರಾಂಗಣದಲ್ಲಿ “ಈಗ ತಾನೇ ಯಾರು ಬಂದರು?” ಎಂದು ಕೇಳಿದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಅರಸನು, “ಯಾರು ಅಂಗಳದಲ್ಲಿ?” ಎಂದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳಕ್ಕೆ ಬಂದಿದ್ದನು. ಅಧ್ಯಾಯವನ್ನು ನೋಡಿ |
“ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗುಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವಾಗಲಿಲ್ಲ” ಎಂದು ಹೇಳಿಸಿದಳು.