Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:10
22 ತಿಳಿವುಗಳ ಹೋಲಿಕೆ  

ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.


ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಸಂಸೋನನು ಅವರಿಗೆ, “ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿತೀರಿಸದೆ ಬಿಡುವುದಿಲ್ಲ” ಎಂದು ಹೇಳಿ


ಆ ಮೇಲೆ ಅವನು ನನಗೆ, “ಆಹಾ, ಉತ್ತರ ದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ” ಎಂದು ಕೂಗಿ ಹೇಳಿದನು.


ಇದಾದನಂತರ ಅರಸನಾದ ಅಹಷ್ವೇರೋಷನು ಕೋಪವನ್ನು ಬಿಟ್ಟು ವಷ್ಟಿಯನ್ನೂ, ಆಕೆ ಮಾಡಿದ್ದನ್ನೂ ಮತ್ತು ಆಕೆಯ ವಿಷಯದಲ್ಲಿ ಮಾಡಿದ ತೀರ್ಪನ್ನೂ ನೆನಪುಮಾಡಿಕೊಳ್ಳುತ್ತಿದ್ದನು.


ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು.


ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.


ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣರಕ್ಷಣೆಯ ನಿಮಿತ್ತವಾಗಿ ಬಿನ್ನಹಮಾಡಿಕೊಳ್ಳಲು ನಿಂತುಕೊಂಡಿದ್ದನು.


ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು.


ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು.


ಧರ್ಮಕ್ಕೆ ಆತುರಪಡುವವನಿಗೆ ದಯೆ, ಕೇಡನ್ನು ಹುಡುಕುವವನಿಗೆ ಕೇಡೇ.


ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು.


ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಮತ್ತು ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೆ ಹಾಕಿಸಿ, ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ, ಅರಸನ ಹೆಸರಿನಲ್ಲಿ ಬರೆಯಲ್ಪಟ್ಟು ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಲು ಬರುವುದಿಲ್ಲ.


ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.


ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.


ತನ್ನ ಹೆಜ್ಜೆಗಳಿಂದಲೇ ಬಲೆಗೆ ಬೀಳುವನು, ಹಾಳು ಗುಂಡಿಯ ಮೇಲೆ ನಡೆಯುವನು.


ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.


ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.


ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು