Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜನರು ನಮ್ಮನ್ನು ಕೊಂದು, ಸಂಹರಿಸಿ, ನಿರ್ನಾಮಗೊಳಿಸುವ ಹಾಗೆ ನಮ್ಮನ್ನು ಮಾರಲಾಯಿತು. ಬರೀ ಮಾರಾಟವಾಗಿದ್ದರೆ ಈ ದುರಂತ ಪರಿಸ್ಥಿತಿಯ ವಿಷಯದಲ್ಲಿ ಅರಸರಿಗೆ ತೊಂದರೆಪಡಿಸುವುದು ಸರಿಯಲ್ಲವೆಂದು ಸುಮ್ಮನಿದ್ದುಬಿಡುತ್ತಿದ್ದೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಜನರು ನಮ್ಮನ್ನು ಕೊಂದು ಸಂಹರಿಸಿ ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ದಾಸದಾಸಿಯರಾಗುವದಕ್ಕೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆ ಪಡಿಸುವದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಕೆಂದರೆ ನಾನು, ನನ್ನ ಜನರೂ ಕೊಲ್ಲಲ್ಪಡಲು, ನಾಶವಾಗಲು, ಸಂಪೂರ್ಣವಾಗಿ ನಿರ್ಮೂಲವಾಗಲು ಮಾರಲ್ಪಟ್ಟಿರುತ್ತೇವೆ. ನಾವು ಬರೇ ಗುಲಾಮರಾಗಿ ಮಾರಲ್ಪಟ್ಟಿದರೆ ನಾನು ಸುಮ್ಮನಿರುತ್ತಿದ್ದೆ. ಯಾಕೆಂದರೆ ಅದು ರಾಜನನ್ನು ತೊಂದರೆಪಡಿಸುವಂಥ ದೊಡ್ಡ ವಿಷಯವಲ್ಲ” ಎಂದು ಉತ್ತರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:4
18 ತಿಳಿವುಗಳ ಹೋಲಿಕೆ  

ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.


ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.


ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.


ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.


ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.


ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ.


ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.


ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.


ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ” ಎಂದನು.


ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು.


ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,


ಅಹಷ್ವೇರೋಷ್ ರಾಜನು ಎಸ್ತೇರ್ ರಾಣಿಯನ್ನು, “ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ?” ಎಂದು ಕೇಳಿದನು.


ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು.


ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.


ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು