Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಕೆ, “ನಮ್ಮ ವೈರಿಯೂ ಶತ್ರುವೂ ಬೇರಾರೂ ಅಲ್ಲ; ಇಗೋ, ಈ ಹಾಮಾನನೇ ಆ ದುಷ್ಟ,” ಎಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಭಯದಿಂದ ನಡುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಕೆಯು - ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಈ ದುಷ್ಟ ಹಾಮಾನನೇ ಅಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಬೆಪ್ಪಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಎಸ್ತೇರಳು ಉತ್ತರಿಸುತ್ತಾ, “ನಮ್ಮನ್ನು ದ್ವೇಷಿಸುವ ಮನುಷ್ಯನು ಈ ಕೆಟ್ಟ ಹಾಮಾನನೇ” ಎಂದು ಹೇಳಿದಳು. ಆಗ ಹಾಮಾನನು ಭಯದಿಂದ ನಡುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದಕ್ಕೆ ಎಸ್ತೇರಳು, “ಆ ವೈರಿಯೂ ಹಗೆಗಾರನೂ ಬೇರೆ ಯಾರೂ ಅಲ್ಲ, ಈ ದುಷ್ಟ ಹಾಮಾನನೇ!” ಎಂದಳು. ಆಗ ಹಾಮಾನನು ಅರಸನ ಮುಂದೆಯೂ, ರಾಣಿಯ ಮುಂದೆಯೂ ಬೆಪ್ಪಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:6
18 ತಿಳಿವುಗಳ ಹೋಲಿಕೆ  

ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.


ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”


ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.


ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು.


ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು.


ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗದವರಿಗೆ ತಲುಪಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿ ತಗ್ಗಿ ಹೋದರು. ಈ ಕಾರ್ಯವು ದೇವರ ಸಹಾಯದಿಂದಲೇ ಪೂರ್ಣಗೊಂಡಿತು ಎಂಬುದು ಅವರಿಗೆ ತಿಳಿದುಬಂದಿತು.


‘ಕೆಟ್ಟವರಿಂದಲೇ ಕೆಡುಕು’ ಎಂಬುದಾಗಿ ಹಿರಿಯರ ಗಾದೆಯುಂಟಷ್ಟೆ. ನಾನು ನಿನಗೆ ವಿರೋಧವಾಗಿ ಕೈಯೆತ್ತುವುದಿಲ್ಲ.


ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ಅಹಷ್ವೇರೋಷ್ ರಾಜನು ಎಸ್ತೇರ್ ರಾಣಿಯನ್ನು, “ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ?” ಎಂದು ಕೇಳಿದನು.


ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್ ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು