Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 8:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅರಸನ ಈ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾದ ಕೂಡಲೆ ಅದರಿಂದ ಪ್ರೇರಿತರಾದ ಅಂಚೆಯವರು ಅರಮನೆಯ ಸವಾರಿ ಕುದುರೆಗಳನ್ನೇರಿ ಅತಿಶೀಘ್ರವಾಗಿ ಧಾವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅರಮನೆಯ ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿಶೀಘ್ರವಾಗಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಆಜ್ಞೆಯನ್ನು ಜನರಿಗೆ ತಲುಪಿಸಲು ಅರಸನು ಸಂದೇಶ ವಾಹಕರನ್ನು ಅವಸರಪಡಿಸಿದನು. ಶೂಷನ್ ನಗರದಲ್ಲೂ ಇದು ಪ್ರಕಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಂಚೆಯವರು ಅರಸನ ಆಜ್ಞೆಯಿಂದ ಪ್ರೇರಿತರಾಗಿ ಅರಮನೆಯ ಕುದುರೆಗಳ ಮೇಲೆ ಅತಿ ಶೀಘ್ರವಾಗಿ ಹೊರಟರು. ಈ ಆಜ್ಞೆಯು ಶೂಷನ್ ನಗರದ ಅರಮನೆಯಲ್ಲಿ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 8:14
13 ತಿಳಿವುಗಳ ಹೋಲಿಕೆ  

ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ಅರಸನು ತನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಿಗೆ ಕಾರ್ಯನಿರ್ವಾಹಕರನ್ನು ಕಳುಹಿಸಬೇಕು; ಅವರು ಸುಂದರಿಯರಾದ ಎಲ್ಲಾ ಕನ್ಯೆಯರನ್ನು ಶೂಷನ್ ಕೋಟೆಯ ಅಂತಃಪುರದಲ್ಲಿ ಕೂಡಿಸಿ, ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಕೊಡಲಿ. ಅವನು ಅವರಿಗೆ ಕಾಂತಿಯನ್ನು ಹೆಚ್ಚಿಸುವ ಲೇಪನ ದ್ರವ್ಯಗಳನ್ನು ಹಂಚಲಿ.


ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸದಲ್ಲಿ ಆಸೀನನಾಗಿ ಆಡಳಿತ ನಡೆಸುತ್ತಿದ್ದನು.


ಹಕಲ್ಯನ ಮಗನಾದ ನೆಹೆಮೀಯನ ಚರಿತ್ರೆ: ಇಪ್ಪತ್ತನೆಯ ವರ್ಷದ ಮಾರ್ಗಶಿರ್ಷ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ,


ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯವು ತುರ್ತಾದ್ದರಿಂದ ಕತ್ತಿಯನ್ನಾಗಲಿ, ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲಿಲ್ಲ, ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ?” ಎಂದು ಕೇಳಿದನು.


ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು.


ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.


ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.


ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು.


ಅವರ ಸೊತ್ತನ್ನು ಸೂರೆಮಾಡಬೇಕು, ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು, ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೆ ಸಿದ್ಧರಾಗಿರಬೇಕು” ಎಂದು ಅಪ್ಪಣೆಮಾಡಿದ್ದನು.


ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು