Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪ್ರತ್ಯುತ್ತರವಾಗಿ ಎಸ್ತೇರಳು ಅರಸನಿಗೆ, “ಇಂದಿನಂತೆ ನಾಳೆಯೂ ರಾಜಾಜ್ಞೆ ಜಾರಿಯಲ್ಲಿರಬೇಕು ಹಾಗು ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಎಸ್ತೇರಳು - ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವದಕ್ಕೂ ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವದಕ್ಕೂ ಯೆಹೂದ್ಯರಿಗೆ ಅಪ್ಪಣೆಯಾಗಬೇಕು ಎಂದು ಬೇಡಿಕೊಳ್ಳಲು ಅರಸನು ಹಾಗೆ ಮಾಡುವದಕ್ಕೆ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದಕ್ಕೆ ಎಸ್ತೇರಳು, “ಅರಸನು ಇಷ್ಟಪಟ್ಟಲ್ಲಿ ನಾಳೆಯೂ ಶೂಷನ್‌ನಲ್ಲಿರುವ ಯೆಹೂದ್ಯರು ಹೀಗೆಯೇ ಮಾಡಲಿ ಮತ್ತು ಹಾಮಾನನ ಆ ಹತ್ತು ಮಂದಿ ಗಂಡುಮಕ್ಕಳನ್ನು ಗಲ್ಲುಕಂಬದಲ್ಲಿ ನೇತಾಡಿಸಲಿ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಎಸ್ತೇರಳು, “ಅರಸನಿಗೆ ಸಮ್ಮತಿಯಾದರೆ, ಇಂದಿನಂತೆಯೇ ರಾಜಾಜ್ಞೆಯು ನಾಳೆಯೂ ಶೂಷನ್ ಪಟ್ಟಣದಲ್ಲಿ ಜಾರಿಗೆ ಬರಲು ಯೆಹೂದ್ಯರಿಗೆ ಅಪ್ಪಣೆ ಆಗಲಿ. ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:13
7 ತಿಳಿವುಗಳ ಹೋಲಿಕೆ  

ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.


ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಲ್ಲೂ ಒಟ್ಟಿಗೆ ಸೇರಿ ಅಲ್ಲಿನ ಮುನ್ನೂರು ಜನರನ್ನು ಕೊಂದರು; ಆದರೆ ಕೊಳ್ಳೆಗೆ ಕೈಹಾಕಲಿಲ್ಲ.


ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು


ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.


ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು