20 ಮೊರ್ದೆಕೈಯು ಅಹಷ್ವೇರೋಷನ ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಎಲ್ಲಾ ಯೆಹೂದ್ಯರಿಗೆ, ಸಮೀಪದಲ್ಲೂ ದೂರದಲ್ಲೂ ಇದ್ದವರು ಎಲ್ಲರಿಗೂ ಪತ್ರಗಳ ಮುಖಾಂತರ ಈ ಕೆಳಕಂಡ ಸಂಗತಿಗಳನ್ನು ತಿಳಿಯಪಡಿಸಿದನು:
20 ನಡೆದ ಸಂಗತಿಗಳನ್ನೆಲ್ಲಾ ಮೊರ್ದೆಕೈ ಬರೆದಿಟ್ಟು ಅಹಷ್ವೇರೋಷನ ಸಾಮ್ರಾಜ್ಯದಲ್ಲಿ ವಾಸಿಸಿದ್ದ ಎಲ್ಲಾ ಯೆಹೂದ್ಯರಿಗೆ, ದೂರ ಮತ್ತು ಹತ್ತಿರದಲ್ಲಿರುವ ಯೆಹೂದ್ಯರಿಗೂ ಪತ್ರ ಬರೆಯಿಸಿದನು.
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.
ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.
ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.
ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.
ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.
ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಅಧಿಕಾರಯುಕ್ತಳಾಗಿ ಪೂರೀಮ್ ಸಂಬಂಧವಾದ ಆ ಎರಡನೆಯ ಶಾಸನವನ್ನು ದೃಢಪಡಿಸುವುದಕ್ಕೋಸ್ಕರ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಪತ್ರಗಳನ್ನು ಬರೆದಳು.