Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 (ಇದು ಅರಸನ ಮುಂದೆ ಬಂದಾಗ ಅವನು - ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕೆಂದು ಅಪ್ಪಣೆ ಮಾಡಿದನಷ್ಟೆ. )

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಹಾಮಾನನ ಕುತಂತ್ರವನ್ನು ಎಸ್ತೇರ್ ರಾಣಿಯು ರಾಜನ ಸಂಗಡ ಮಾತಾಡುವುದರ ಮೂಲಕ ನಿರರ್ಥಕಗೊಳಿಸಿ ಅವನಿಗೂ ಅವನ ಕುಟುಂಬಕ್ಕೂ ಮರಣವಾಗುವಂತೆ ಮಾಡಿದಳು. ಹಾಮಾನನೂ ಅವನ ಗಂಡುಮಕ್ಕಳೂ ಗಲ್ಲಿಗೇರಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:25
19 ತಿಳಿವುಗಳ ಹೋಲಿಕೆ  

ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.


ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು.


ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, ಆಗ ನಾನು ತಪ್ಪಿಸಿಕೊಳ್ಳುವೆನು.


ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ,


ಅಹಷ್ವೇರೋಷ್ ರಾಜನು ಎಸ್ತೇರ್ ರಾಣಿಯನ್ನು, “ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ?” ಎಂದು ಕೇಳಿದನು.


ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.


ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು.


ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ


ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ.


ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.


ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.


ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು.


ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು.


ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು