Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಯಿತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದ ಹಾಗೆಲ್ಲಾ, ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಅಧಿಕಾರ ಪ್ರಬಲವಾಗುತ್ತಾ ಬಂದುದರಿಂದ ಅವನ ಕೀರ್ತಿ ಎಲ್ಲಾ ಸಂಸ್ಥಾನಗಳಲ್ಲಿಯೂ ಹಬ್ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಿಂದ ಎಲ್ಲಾ ಜನಾಂಗದವರಿಗೆ ಭಯವುಂಟಾಗಿತ್ತು; ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಪ್ರಾಬಲ್ಯವು ಹೆಚ್ಚಾಗುತ್ತಾ ಬಂದಹಾಗೆಲ್ಲಾ ಅವನ ಸುದ್ದಿಯೂ ಸಕಲ ಸಂಸ್ಥಾನಗಳಲ್ಲಿಯೂ ಹಬ್ಬಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲದೆ ಸಂಸ್ಥಾನಗಳಲ್ಲಿದ್ದ ಅಧಿಕಾರಿಗಳು, ರಾಜ್ಯಪಾಲರು, ಆಡಳಿತಾಧಿಕಾರಿಗಳು ಯೆಹೂದ್ಯರಿಗೆ ನೆರವಾದರು. ಯಾಕೆಂದರೆ ಅವರು ಮೊರ್ದೆಕೈಗೆ ಹೆದರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಪ್ರಾಂತಗಳ ಉಪರಾಜರೂ, ಪ್ರತಿನಿಧಿಗಳೂ, ಅಧಿಪತಿಗಳೂ, ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಏಕೆಂದರೆ ಮೊರ್ದೆಕೈಯ ಭಯ ಅವರಿಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:3
9 ತಿಳಿವುಗಳ ಹೋಲಿಕೆ  

ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.


ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.


ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.


ಆಗ ಎಸ್ತೇರಳು ಅವನಿಗೆ, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು.


ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.


ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:


ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು